Breaking News
Home / ಜಿಲ್ಲೆ / ಕೋಲಾರ / ಪ್ರಧಾನಿ ಮೋದಿ ಭಾಷಣದ ಬಳಿಕ ಮದ್ಯದಂಗಡಿ ತೆರೆಯುವ ಕುರಿತು ನಿರ್ಧಾರ: ಸಚಿವ ನಾಗೇಶ್

ಪ್ರಧಾನಿ ಮೋದಿ ಭಾಷಣದ ಬಳಿಕ ಮದ್ಯದಂಗಡಿ ತೆರೆಯುವ ಕುರಿತು ನಿರ್ಧಾರ: ಸಚಿವ ನಾಗೇಶ್

Spread the love

 

ಕೋಲಾರ: ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯುವ ವಿಚಾರವಾಗಿ ಚರ್ಚೆ ನಡೆಸಲಾಗಿದ್ದು, ನಾಳೆ ಪ್ರಧಾನಿ ಮೋದಿ ಅವರ ಸೂಚನೆ ಮೇರೆಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅಬಕಾರಿ ಸಚಿವ ನಾಗೇಶ್ ತಿಳಿಸಿದ್ದಾರೆ.

ಕೋಲಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರದ ಮದ್ಯದಂಗಡಿ ತೆರೆಯಲು ಚಿಂತನೆ ಮಾಡಲಾಗಿದೆ. ಪ್ರಧಾನಿ ಮೋದಿ ಅವರ ಭಾಷಣದ ನಂತರ ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯಲು ತೀರ್ಮಾನ ಮಾಡಲಾಗುವುದು. ಕಳ್ಳಬಟ್ಟಿ ಸಾರಾಯಿ ತಡೆಗಟ್ಟಲು ನಮ್ಮ ಅಧಿಕಾರಿಗಳು ಹಗಲು ರಾತ್ರಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ ಸರ್ಕಾರದ ಎಂಎಸ್‍ಐಎಲ್ ಓಪನ್ ಮಾಡುವಂತೆ ಸರ್ಕಾರದ ಮೇಲೆ ಜನರ ಒತ್ತಡ ಜಾಸ್ತಿ ಇದೆ ಎಂದರು.

ರಾಜ್ಯದಲ್ಲಿ ಕೊರೊನಾ ಸೋಂಕು ತಡೆಗಟ್ಟುವುದು ಸರ್ಕಾರದ ಮುಖ್ಯ ಉದ್ದೇಶವಾಗಿದ್ದು, ಸೋಂಕು ತಡೆಗಟ್ಟುವಲ್ಲಿ ಅನುಸರಿಸಬೇಕಾದ ಕ್ರಮಗಳತ್ತ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದರು.


Spread the love

About Laxminews 24x7

Check Also

ಗ್ರಾಹಕರಿಗೆ ಬಿಗ್ ಶಾಕ್ : ಶೀಘ್ರವೇ ಹೋಟೆಲ್ ಊಟ, ತಿಂಡಿ ದರ ಹೆಚ್ಚಳ..!

Spread the loveಬೆಂಗಳೂರು : ಬೆಲೆ ಏರಿಕೆಯಿಂದ ತತ್ತರಿಸಿರುವ ಜನತೆಗೆ ಮತ್ತೊಂದು ಶಾಕ್ ಎದುರಾಗುವ ಸಾಧ್ಯತೆ ಇದ್ದು, ಸಿಲಿಂಡರ್ ಬೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ