ಕೊರೋನಾ ಆತಂಕ : ಬೆಣ್ಣೆನಗರಿಗಿಲ್ಲ ಮಾರಕ ರೋಗದ ಭೀತಿ..!!
ವಿಶ್ವದಾದ್ಯಂತ ಸಾವಿರಾರು ಜನರನ್ನು ಬಲಿ ಪಡೆದಿರುವ ಕಿಲ್ಲರ್ ಕೊರೋನಾ ವೈರಸ್ ಆತಂಕ ಬೆಣ್ಣೆನಗರಿ ದಾವಣಗೆರೆಯಿಂದ ದೂರಾಗಿದೆ.ಈಗ ಈ ಮಹಾಮಾರಿ ಕೊರೋನಾ ಆತಂಕದಿಂದ ದಾವಣಗೆರೆ ಜಿಲ್ಲಾಡಳಿತ ನಿರಾಳವಾಗಿದೆ.ವಿದೇಶಕ್ಕೆ ತೆರಳಿ ವಾಪಸಾಗಿದ್ದ 12 ಮಂದಿಯಲ್ಲಿ ಕೊರೋನಾ ಸೋಂಕು ನೆಗೆಟಿವ್ ಇದ್ದು, ಈ ಬಗ್ಗೆ ದಾವಣಗೆರೆ ಜಿಲ್ಲಾಡಳಿತ ಸ್ಪಷ್ಟನೆ ನೀಡಿದೆ.14 ಹಾಗೂ 28 ದಿನಗಳ ಅವಧಿಯ ತಪಾಸಣೆ ಮುಗಿದಿದ್ದು, 12 ಮಂದಿಗೂ ಯಾವುದೇ ಸೋಂಕಿಲ್ಲ ಎನ್ನುವುದು ದೃಢಪಟ್ಟಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಸೋಂಕು ಬಗ್ಗೆ ಅಪಪ್ರಚಾರ ಸುಳ್ಳು ಮಾಹಿತಿ ಹರಿಬಿಡುವವರ ವಿರುದ್ಧ ಕ್ರಮ ಕೈಗೊಳ್ಳುವುದಾಗಿಯೂ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.