Breaking News

ಪ್ರೀತಿಸಿದವನೊಂದಿಗೆ ಮದುವೆಯಾಗಲು ಕುಟುಂಬಸ್ಥರ ವಿರೋಧ – ಯುವತಿ ಆತ್ಮಹತ್ಯೆ

Spread the love

ಧಾರವಾಡ: ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿ  ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಶ್ವೇತಾ ಕೊಟೆನ್ನವರ್ (18) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೃತ ಶ್ವೇತ ಹಲವು ವರ್ಷಗಳಿಂದ ಹುಬ್ಬಳ್ಳಿ ತಾಲೂಕಿನ ಕೆರೆಸೂರ ಗ್ರಾಮದ ನಾಗರಾಜ್ ಎನ್ನುವ ಯುವಕನನ್ನ ಪ್ರೀತಿಸುತ್ತಿದ್ದಳು. ಈ ವಿಷಯವನ್ನು ತನ್ನ ಕುಟುಂಬಸ್ಥರಿಗೆ ತಿಳಿಸಿ, ನಾಗರಾಜ್‌ನನ್ನು ಮದುವೆಯಾಗುವ ಇಂಗಿತ ವ್ಯಕ್ತಪಡಿಸಿದ್ದಳು. ಆದರೆ ಇದಕ್ಕೆ ಕುಟುಂಬಸ್ಥರು ಒಪ್ಪಿರಲಿಲ್ಲ.

ಇದರಿಂದ ಮನನೊಂದು ವಿಷ ಸೇವಿಸಿ ಶ್ವೇತ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈ ಬಗ್ಗೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಬೀದರ್ ATM ದರೋಡೆಕೋರರು ಕೊನೆಗೂ ಅರೆಸ್ಟ್‌

Spread the loveಬಿಹಾರದಲ್ಲಿ  ಆರೋಪಿಗಳ ಕಾರು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಅಮನ್‌ಕುಮಾರ್ ಸಿಂಗ್ & ಅಲೋಕ್‌ಕುಮಾರ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ‌‌‌‌. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ