ಗಿರೀಶ್ ಕೇರಳದ ಅಲಪ್ಪಿ ಜಿಲ್ಲೆಯ ಕಲವೂರ್ ಗ್ರಾಮದಲ್ಲಿ ಪೊಲೀಸರಿಗೆ ನೀರು ಹಾಗೂ ಆಹಾರ ಸರಬರಾಜು ಮಾಡಿ ಗಮನ ಸೆಳೆಯುತ್ತಿದ್ದಾರೆ. ಗಿರೀಶ್ ತೆಂಗಿನ ಮರ ಹತ್ತಿ ಕಾಯಿಕೀಳುವ ಕೆಲಸ ಮಾಡುತ್ತಿದ್ದಾರೆ. ಪ್ರತಿ ತೆಂಗಿನ ಮರ ಹತ್ತಿ ಕಾಯಿ ಕಿತ್ತು 100 ರೂ. ಆದಾಯ ಗಳಿಸುತ್ತಾರೆ. ಆದರೆ ತಮಗೆ ಬರುವ ಕಡಿಮೆ ಆದಾಯದಲ್ಲಿಯೇ ಗಿರೀಶ್ ಪೊಲೀಸರಿಗೆ ಆಹಾರ ವಿತರಣೆ ಮಾಡುವ ಕಾಯಕದಲ್ಲಿ ನಿರತರಾಗಿದ್ದಾರೆ.

ಗಿರೀಶ್ ಲಾಕ್ಡೌನ್ ಪ್ರಾರಂಭವಾದಾಗಿನಿಂದಲೂ ಪೊಲೀಸ್ ಸಿಬ್ಬಂದಿಗೆ ಉಚಿತ ಆಹಾರ ಮತ್ತು ನೀರನ್ನು ನೀಡುತ್ತಿದ್ದಾರೆ. ಪೊಲೀಸರು ನಿರಾಕರಿಸಿದರೂ ಗಿರೀಶ್ ಮಾತ್ರ ತಮ್ಮ ಕೈಲಾದ ತಿಂಡಿಯನ್ನು ತಂದು ನೀಡುತ್ತಿದ್ದಾರೆ.
ಈ ಬಗ್ಗೆ ಮಾತನಾಡಿದ ಕಲವೂರ್ ಸಬ್ ಇನ್ಸ್ ಪೆಕ್ಟರ್ ಟೋಲ್ಸನ್ ಜೋಸೆಫ್, ಈ ವ್ಯಕ್ತಿಯು ಪ್ರತಿದಿನ ತನ್ನ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ಜೊತೆಗೆ ಕರ್ತವ್ಯದಲ್ಲಿದ್ದ ಪೊಲೀಸರಿಗೆ ಆಹಾರ ನೀಡುತ್ತಿದ್ದರು. ಒಂದು ದಿನ ವ್ಯಕ್ತಿಯ ಬಗ್ಗೆ ವಿಚಾರಿಸಿದೆ. ಆ ವ್ಯಕ್ತಿಯು ಪ್ರತಿದಿನ ನೀರು ಮತ್ತು ತಿಂಡಿಯನ್ನು ಪೊಲೀಸರಿಗೆ ಪೂರೈಸುತ್ತಾರೆ ಎಂದು ಪೊಲೀಸರು ನನಗೆ ಹೇಳಿದರು ಎಂದರು.