ಎರಡು ಗುಂಪುಗಳ ನಡುವೆ ಮಾರಾಮಾರಿ – ಮಹಿಳೆಯನ್ನ ಬೆತ್ತಲುಗೊಳಿಸಿ ಹಲ್ಲೆಗೆ ಯತ್ನ

Spread the love

ಹಾಸನ: ದಾರಿ ವಿಚಾರಕ್ಕೆ ಗ್ರಾಮದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, ಈ ವೇಳೆ ಮಹಿಳೆಯನ್ನ ಬೆತ್ತಲೆಗೊಳಿಸಿ ಹಲ್ಲೆಗೆ ಯತ್ನಿಸಿರುವ ಘಟನೆ ಹಾಸನ  ಜಿಲ್ಲೆಯ ಬೇಲೂರು  ತಾಲ್ಲೂಕಿನ ಹಂಚಿಹಳ್ಳಿ ಗ್ರಾಮದಲ್ಲಿ ನಡೆದಿದೆ.

ಮಾ.22ರಂದು ಬೆಳಿಗ್ಗೆ ಗ್ರಾಮದ ಗೋವಿಂದಪ್ಪ, ಕುಮಾರ್ ಹಾಗೂ ಇತರರ ಮನೆಗೆ ತೆರಳಲು ದಾರಿ ನಿರ್ಮಾಣ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಗೋವಿಂದಪ್ಪನ ಸಂಬಂಧಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆಗೆ ಮುಂದಾಗಿದ್ದು, ಘಟನೆ ಸಂಬಂಧ ಹಳೆಬೀಡು ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ.

ಮಹಿಳೆಯ ಸಂಬಂಧಿ ನೀಡಿದ ದೂರು ಆಧರಿಸಿ ಗಂಗಾಬೋವಿ, ಶಿವಕುಮಾರ್, ಸೋಮ, ಕಿರಣ್, ಆನಂದ್, ಪುನೀತ್, ಪ್ರತಾಪ್, ಪ್ರಸನ್ನ, ನಾಗಾಬೋವಿ, ಮಂಜಾಬೋವಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಗಂಗಾಬೋವಿ, ಶಿವಕುಮಾರ್ ಹಾಗೂ ಇತರರು ಮಹಿಳೆ ಮೇಲೆ ಗುಂಪಾಗಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

ಹಲ್ಲೆ ಸಂಬಂಧ ಪ್ರತಾಪ್, ಸೋಮ, ಮಂಜಾಬೋವಿ, ಕಿರಣರನ್ನು ಈವರೆಗೂ ಬಂಧನ ಮಾಡಿಲ್ಲ ಎಂದು ಮಹಿಳೆಯ ಸಂಬಂಧಿಕರು ಹಾಸನ ಡಿಸಿ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ. ಎಂಟು ವರ್ಷದಿಂದ ನಮ್ಮನ್ನ ಬಹಿಷ್ಕಾರ ಹಾಕಲಾಗಿದೆ. ಕುಡಿಯಲು ನೀರು ಕೊಡುತ್ತಿಲ್ಲ, ನಮ್ಮನ್ನ ಪ್ರತ್ಯೇಕವಾಗಿ ಇರಿಸಲಾಗಿದ್ದು, ಜೀವ ಬೆದರಿಕೆ ಹಾಕುತ್ತಿದ್ದಾರೆ. ಪದೇ ಪದೇ ಹಲ್ಲೆ, ದೌರ್ಜನ್ಯ ನಡೆಸುತ್ತಿದ್ದು, ರಕ್ಷಣೆ ಕೊಡಿ ಎಂದು ನೊಂದ ಕುಟುಂಬಸ್ಥರು ಒತ್ತಾಯಿಸಿದ್ದಾರೆ.

ಘಟನೆಯ ವೀಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಳೆಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ – ವಿದ್ಯಾರ್ಥಿಗಳ ಎದುರೇ ದುರ್ಮರಣ

Spread the loveಹಾಸನ: ವಿದ್ಯಾರ್ಥಿಗಳಿಗೆ  ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ  ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟ ದುರ್ಘಟನೆ ಅರಕಲಗೂಡು ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ