ತಿರುವನಂತಪುರಂ: ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿವಿಧ ಗುಂಪುಗಳ ನಡುವೆ ದ್ವೇಷದ ವಾತಾವರಣಕ್ಕೆ ಉತ್ತೇಜನ ನೀಡುವ ಟ್ವೀಟ್ ಹಾಗೂ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಶೋಭಾ ಕರಂದ್ಲಾಜೆ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆಗೆ ಬೆಂಬಲ ನೀಡಿದ್ದಾರೆ ಎಂಬ ಕಾರಣಕ್ಕೆ ಕೇರಳದಲ್ಲಿರುವ ಹಿಂದೂಗಳಿಗೆ ಆಲ್ಲಿನ ಸರ್ಕಾರ ನೀರು ನೀಡುತ್ತಿಲ್ಲ. ಈ ಮೂಲಕ ಕೇರಳ ಮತ್ತೊಂದು ಕಾಶ್ಮೀರವಾಗಲು ಹೊರಟಿದೆ ಎಂದು ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಚೋದನಾಕಾರಿ ಟ್ವಿಟ್ ಹಿನ್ನಲೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ