Breaking News

ಆಷಾಢ ಮಾಸದ ಮೊದಲ ಶುಕ್ರವಾರ – ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ, ನಾಗಲಕ್ಷ್ಮೀಯಾದ ತಾಯಿ

Spread the love

ಮೈಸೂರು: ಇಂದು ಆಷಾಢ ಮಾಸದ ಮೊದಲ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟದಲ್ಲಿ  ಸಂಭ್ರಮ ಆವರಿಸಿದೆ.

ಇಡೀ ಬೆಟ್ಟವನ್ನು ವಿಶೇಷ ವಿವಿಧ ಹೂಗಳಿಂದ ಅಲಂಕಾರ ಮಾಡಲಾಗಿದ್ದು, ಮುಂಜಾನೆಯಿಂದಲೇ ಚಾಮುಂಡಿ ತಾಯಿಗೆ  ವಿಶೇಷ ಪೂಜೆ ನಡೆಯುತ್ತಿದೆ. ತಾಯಿ ಚಾಮುಂಡಿ ನಾಗಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದು, ಉತ್ಸವ ಮೂರ್ತಿಗೆ ವಿಶೇಷವಾಗಿ ಅಲಂಕಾರ ಮಾಡಲಾಗಿದೆ. ದೇವಿಯ ದರ್ಶನಕ್ಕೆ ಬೆಳಗಿನ ಜಾವದಿಂದಲೇ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. 

ಈ ಬಾರಿ 2 ಸಾವಿರ ರೂ. ಮೌಲ್ಯದ ಟಿಕೆಟ್ ಪಡೆದವರಿಗೆ ನೇರ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಅಭಿಷೇಕ, ಕುಂಕುಮಾರ್ಚನೆ, ಮಹಾಮಂಗಳಾರತಿ ಬಳಿಕ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಮುಂಜಾನೆ 5:30ರಿಂದ ಬೆಳಗ್ಗೆ 10 ಗಂಟೆಯವರೆಗೆ ವಿವಿಐಪಿಗಳಿಗೆ ದರ್ಶನಕ್ಕೆ ಅವಕಾಶವಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ