Breaking News

ರಸ್ತೆಬದಿ ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ – ಒಂದೇ ಕುಟುಂಬದ ಐವರು ದುರ್ಮರಣ

Spread the love

ಚಿತ್ರದುರ್ಗ: ರಸ್ತೆಬದಿ ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿಯಾಗಿ ಸ್ಥಳದಲ್ಲೇ ಐವರು ದುರ್ಮರಣಕ್ಕೀಡಾದ ಘಟನೆ ಚಿತ್ರದುರ್ಗ  ಜಿಲ್ಲೆಯ ಮೊಳಕಾಲ್ಮೂರು  ತಾಲೂಕಿನ ಬೈರಾಪುರ ಗ್ರಾಮದ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಬುಲೆರೋ ವಾಹನ ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ, ವಾಹನದಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರೆಲ್ಲರೂ ಬಳ್ಳಾರಿ ಮೂಲದವರು. ವೆಂಕಟೇಶ್ (28), ಶಿವಮ್ಮ (25), ಮೀನಾಕ್ಷಿ (16), ಪೂಜಾ (4), ಪರುಶುರಾಮ (1.5) ಮೃತರು. ಗಾಯಾಳುಗಳನ್ನು ಮೊಳಕಾಲ್ಮೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಮೊಳಕಾಲ್ಮೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೊಳಕಾಲ್ಮೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

About Laxminews 24x7

Check Also

ಮದುವೆ ಆಗ್ತೀನಿ ಅಂತ ನಂಬಿಸಿ ಯುವತಿಗೆ ವಂಚನೆ ಆರೋಪ – ಎಫ್‌ಐಆರ್‌ ಆದ್ರೂ ಪೊಲೀಸರು ಸೈಲೆಂಟ್

Spread the loveದಾವಣಗೆರೆ: ಪ್ರೀತಿ ಪ್ರೇಮದ ಹೆಸರಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಯುವಕನೊಬ್ಬ ವಂಚಿಸಿದ ಪ್ರಕರಣ ಹರಿಹರದಲ್ಲಿ ನಡೆದಿದೆ. ಮಲೆಬೆನ್ನೂರು  ಮೂಲದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ