Breaking News

5 ಲಕ್ಷ ದೇಣಿಗೆ ನೀಡಿದ ಬಿಗ್‍ಬಾಸ್ ಸ್ಪರ್ಧಿ ದೀಪಿಕಾ ದಾಸ್

Spread the love

ಬೆಂಗಳೂರು: ಕೊರೊನಾ ಸೋಂಕಿತರ ನೆರವಿಗಾಗಿ ಈಗಾಗಲೇ ಕೆಲ ನಟ-ನಟಿಯರು ತಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದಾರೆ. ಇದೀಗ ರಿಯಾಲಿಟಿ ಶೋ ‘ಬಿಗ್‍ಬಾಸ್ ಸೀಸನ್ 7’ ರ ಸ್ಪರ್ಧಿ ದೀಪಿಕಾ ದಾಸ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ದೇಣಿಗೆ ನೀಡಿದ್ದಾರೆ.

ದೀಪಿಕಾ ದಾಸ್ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಲಕ್ಷ ದೇಣಿಗೆ ನೀಡಿರುವ ಬಗ್ಗೆ ಇನ್‍ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. “ಮಾನವೀಯತೆಗಾಗಿ, ನಮ್ಮ ದೇಶ ಮತ್ತು ನಮ್ಮ ಸಹ ನಾಗರಿಕರಿಗಾಗಿ ಸಹಾಯ ಮಾಡುವ ಸಮಯ ಈಗ ಬಂದಿದೆ. ಹೀಗಾಗಿ ಅವರಿಗೆ ಸಹಾಯ ಮಾಡೋಣ. ನಾನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕೋವಿಡ್-19 ತಡೆಗೆ 5 ಲಕ್ಷ ಕೊಡುತ್ತಿದ್ದೇವೆ” ಎಂದು ಹೇಳಿದ್ದಾರೆ.

ಸಾಗರದ ಪ್ರತಿ ಹನಿಗೂ ಮೌಲ್ಯವಿದೆ. ಆದ್ದರಿಂದ ಕೊವೀಡ್-19 ಪರಿಸ್ಥಿತಿಯ ವಿರುದ್ಧ ಹೋರಾಡಲು ಸಹಾಯ ಮಾಡಬೇಕೆಂದು ನಾನು ನಿಮ್ಮೆಲ್ಲರನ್ನೂ ಕೇಳಿಕೊಳ್ಳುತ್ತೇನೆ. ಇದು ಯಾವ ದೊಡ್ಡಸ್ತಿಕೆ ತೋರುವುದಕ್ಕಲ್ಲ. ನೀವು ಕೂಡ ಈ ಕೆಲಸದಲ್ಲಿ ಭಾಗಿ ಆಗಲಿ ಎಂದು ಹೇಳಿದೆ. ಎಲ್ಲರೂ ಸಹಾಯ ಮಾಡೋಣ” ಎಂದು ಮನವಿ ಮಾಡಿಕೊಂಡಿದ್ದಾರೆ.

ಜೊತೆಗೆ ತಾವು ನೀಡುತ್ತಿರುವ 5 ಲಕ್ಷ ರೂಪಾಯಿಗಳ ಚೆಕ್ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ. ಅಲ್ಲದೇ ಇತರಿಗೂ ಸಹಾಯ ಮಾಡುವಂತೆ ತಿಳಿಸಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಬ್ಯಾಂಕ್ ವಿವರಗಳಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.


Spread the love

About Laxminews 24x7

Check Also

ಜಿಮ್ ಬಂಪರ್ ;ಬಿಯಾಂಡ್ ಬೆಂಗಳೂರು ಪ್ರದೇಶದಲ್ಲಿ ಶೇ 75ರಷ್ಟು ಹೂಡಿಕೆ ; ಉತ್ತರ ಕರ್ನಾಟಕಕ್ಕೆ ಹರಿದ ಶೇ.45ರಷ್ಟು ಬಂಡವಾಳ

Spread the loveಬೆಂಗಳೂರು: ನಾಲ್ಕು ದಿನಗಳ ಕಾಲ ಇಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಮೂಲಕ ಸದ್ಯಕ್ಕೆ ರಾಜ್ಯಕ್ಕೆ 10,27,378 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ