Breaking News

ಚಾಮರಾಜನಗರ:ಆಹಾರ ಕಿಟ್ ವಿತರಿಸಿ ಮಾನವೀಯತೆ ಮೆರೆದ ಟಿಬೇಟಿಯನ್ ಕ್ಯಾಂಪ್ ಜನತೆ

Spread the love

ಚಾಮರಾಜನಗರ: ಕೊರೊನಾ ತುರ್ತು ಪರಿಸ್ಥಿತಿ ಹಿನ್ನೆಲೆ ಮುಂದಿನ ಜೀವನ ನಿರ್ವಹಣೆಗೆ ಹೇಗೆ ಎಂದು ಕಂಗಾಲಾಗಿರುವ ಗಿರಿಜನ ಹಾಡಿಗಳ ಜನರಿಗೆ ಜಿಲ್ಲೆಯ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಟಿಬೇಟಿಯನ್ ಸೆಟ್ಲೆಮೆಂಟ್ ಯೂನಿಯನ್ ಸಿಬ್ಬಂದಿ ಆಹಾರ ಸಾಮಗ್ರಿಗಳ ಕಿಟ್ ವಿತರಿಸಿ ಮಾನವೀಯತೆ ಮೆರೆದಿದ್ದಾರೆ.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶವನ್ನೇ ಲಾಕ್‍ಡೌನ ಮಾಡಿದೆ. ಇದರಿಂದ ದಿನಗೂಲಿ ಕಾರ್ಮಿಕರಿಗೆ ಜೀವನ ನಡೆಸುವುದು ಕಷ್ಟಕರವಾಗಿದೆ. ತುತ್ತು ಅನ್ನಕ್ಕೂ ಪರದಾಡುವಂತಾಗಿದೆ. ಪರಿಸ್ಥಿತಿ ಅರಿತ ಹನೂರು ತಾಲೂಕಿನ ಒಡೆಯರಪಾಳ್ಯ ಸಮೀಪದ ಟಿಬೇಟಿಯನ್ ಸೆಟ್ಲೆಮೆಂಟ್ ಯೂನಿಯನ್ ಸಿಬ್ಬಂದಿ ಹಾಗೂ ಟಿಬೇಟಿಯನ್ನರು ಸ್ವಯಂ ಪ್ರೇರಿತರಾಗಿ ಹಳ್ಳಿಗಳಲ್ಲಿ ದೇಣಿಗೆ ಸಂಗ್ರಹಿಸಿ ಗಿರಿ ಜನರಿಗೆ ಸಹಾಯ ಮಾಡಿದ್ದಾರೆ.

ತಾಲೂಕಿನ ಗಿರಿಜನ ಹಾಡಿಗಳಾದ ಹಾವಿನಮೂಳೆ, ಮಾವತ್ತೂರು, ಯರಗಬಾಳು, ಉದ್ದಟಿ, ಜಿರಿಗಿಗದ್ದೆ, ಹಿರಿಯಂಬಲಬ ಹಾಗೂ ಕತ್ತೆಕಾಲು ಪೋಡುಗಳ ಗಿರಿಜನರಿಗೆ ಆಹಾರ ಪದಾರ್ಥ ವಿತರಿಸಿದ್ದಾರೆ. ಸುಮಾರು 500 ಸೋಲಿಗ ಕುಟುಂಬಗಳಿಗೆ 2 ಕೆ.ಜಿ ರಾಗಿ, ಬೆಲ್ಲ, ಎಣ್ಣೆ, ಬಿಸ್ಕೆಟ್, ಚಹಾ ಪುಡಿ ಸೇರಿದಂತೆ ಇನ್ನಿತರೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಮೂಲಕ ಗಿರಿಜನ ಹಾಡಿಗಳ ಜನರಿಗೆ ಆಸರೆಯಾಗಿದ್ದಾರೆ.


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ