Breaking News
Home / ಜಿಲ್ಲೆ / ಗದಗ / ಬಿರುಗಾಳಿ ಮಳೆಗೆ ಮನೆ ಕಳೆದುಕೊಂಡು ಕಣ್ಣೀರಿಡುತ್ತಿದೆ ಕುಟುಂಬ………

ಬಿರುಗಾಳಿ ಮಳೆಗೆ ಮನೆ ಕಳೆದುಕೊಂಡು ಕಣ್ಣೀರಿಡುತ್ತಿದೆ ಕುಟುಂಬ………

Spread the love

ಗದಗ: ಮಳೆ ರಾಯನ ಆರ್ಭಟಕ್ಕೆ ಮನೆಯ ಶೀಟ್‍ಗಳು ಹಾರಿ ಹೋಗಿ, ಮನೆ ಸಂಪೂರ್ಣ ನಾಶವಾಗಿವೆ. ಪುಟ್ಟ ಮನೆಗಳಲ್ಲೇ ವಾಸಿಸುತ್ತಿದ್ದ ಬಡ ಕುಟುಂಬಗಳು ಸೂರು ಇಲ್ಲದೆ ಕಣ್ಣೀರಿಡುತ್ತಿವೆ.

ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಘಟನೆ ನಡೆದಿದ್ದು, ಹಮಾಲರ ಕಾಲೋನಿಯ ಕಳಕವ್ವ ತಳವಾರ ಅವರ ಮನೆಯ ಶೀಟ್‍ಗಳು ಹಾರಿಹೋಗಿವೆ. ಬೆಳಗಿನ ಜಾವ ಸುರಿದ ಬಿರುಗಾಳಿ ಸಹಿತ ಮಳೆಯ ಅವಾಂತರಕ್ಕೆ ನಿವಾಸಿಗಳು ಕಣ್ಣೀರಿಡುತ್ತಿದ್ದಾರೆ. ಬಿರುಗಾಳಿ ಮಳೆ ಸುರಿಯುವ ಸಂದರ್ಭದಲ್ಲಿ ಮನೆಯಲ್ಲಿ ಗರ್ಭಿಣಿ ಹಾಗೂ ಚಿಕ್ಕಮಕ್ಕಳು ಸಹ ಇದ್ದು, ಭಯದಿಂದಲೇ ಜೀವ ಕೈಯ್ಯಲ್ಲಿ ಹಿಡಿದು ಕುಳಿತಂತಾಗಿತ್ತು.

ಹಮಾಲರ ಕಾಲೋನಿಯಲ್ಲಿ ಹತ್ತಾರು ವರ್ಷಗಳಿಂದ ಈ ಕುಟುಂಬಗಳು ಹೀಗೆ ಜೀವನ ನಡೆಸುತ್ತಿವೆ. ಇಲ್ಲಿಯವರೆಗೆ ಯಾವೊಬ್ಬ ಜನಪ್ರತಿನಿಧಿಗಳು, ಅಧಿಕಾರಿಗಳು ನಮಗೆ ಸೌಲಭ್ಯಗಳನ್ನು ನೀಡಿಲ್ಲ ಎಂದು ನೊಂದ ಕುಟುಂಬಗಳು ಕಣ್ಣೀರಿಡುತ್ತಿವೆ. ಪಟ್ಟಣದ ಅನೇಕ ಕಡೆಗಳಲ್ಲಿ ಮನೆಗಳ ಮೇಲ್ಛಾವಣಿಗಳು ನಾಶವಾಗಿವೆ. ವಿದ್ಯುತ್ ಕಂಬಗಳು, ಗಿಡಮರಗಳು ಧರೆಗುರುಳಿವೆ. ಮಳೆಯ ಅವಾಂತರದಿಂದಾಗಿ ಜನ ತತ್ತರಿಸಿ ಹೋಗಿದ್ದಾರೆ.


Spread the love

About Laxminews 24x7

Check Also

ಲೈಂಗಿಕ ಕಿರುಕುಳ ; ಕ್ಷೇತ್ರ ಶಿಕ್ಷಣಾಧಿಕಾರಿಗೆ 5 ವರ್ಷ ಜೈಲು, ದಂಡ ವಿಧಿಸಿದ ಕೋರ್ಟ್.!

Spread the loveಗದಗ : ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕೇಸ್ ಗೆ ಸಂಬಂಧಿಸಿದಂತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ