Breaking News
Home / ಜಿಲ್ಲೆ / ಕಲಬುರ್ಗಿ / ಕಲಬುರಗಿಗೆ ಹೊಸ ಟೆನ್ಶನ್ – ಮುಂಬೈನಿಂದ 1,200ಕ್ಕೂ ಹೆಚ್ಚು ಕಾರ್ಮಿಕರು ರಿಟರ್ನ್

ಕಲಬುರಗಿಗೆ ಹೊಸ ಟೆನ್ಶನ್ – ಮುಂಬೈನಿಂದ 1,200ಕ್ಕೂ ಹೆಚ್ಚು ಕಾರ್ಮಿಕರು ರಿಟರ್ನ್

Spread the love

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ಹೆಚ್ಚಾದ ಹಿನ್ನೆಲೆಯಲ್ಲಿ ಜನ ಚಿಂತೆಗೀಡಾಗಿದ್ದಾರೆ. ಹೀಗಿರುವಾಗಲೇ ಮುಂಬೈನಿಂದ ಸಾವಿರಾರು ಕೂಲಿ ಕಾರ್ಮಿಕರು ವಿಶೇಷ ರೈಲು ಮೂಲಕ ಕಲಬುರಗಿಗೆ ತಡರಾತ್ರಿ ಆಗಮಿಸಿದ್ದಾರೆ. ಇದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ.

ಕೊರೊನಾ ಹಾಟ್‍ಸ್ಪಾಟ್ ಕಲಬುರಗಿಗೆ ಹೊಸ ಟೆನ್ಶನ್ ಶುರುವಾಗಿದೆ. ಮುಂಬೈನಿಂದ ಸಾವಿರಾರು ವಲಸೆ ಕಾರ್ಮಿಕರು ಶ್ರಮಿಕ್ ಸ್ಪೆಷಲ್ ರೈಲಿನ ಮೂಲಕ ಕಲಬುರಗಿಗೆ ತಡರಾತ್ರಿ 2 ಗಂಟೆಗೆ ಬಂದಿಳಿದಿದ್ದಾರೆ. ಮುಂಬೈನಿಂದ ಬಂದಿಳಿದ ವಲಸಿಗ ಕಾರ್ಮಿಕರನ್ನು ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ಸೇರಿದಂತೆ ಹಲವು ಬಿಜೆಪಿ ನಾಯಕರು ಬರಮಾಡಿಕೊಂಡರು.

ಕುಟುಂಬ ಸಮೇತ ತವರಿಗೆ ಹಿಂತಿರುಗಿದ 1,200ಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ರೈಲು ನಿಲ್ದಾಣದಲ್ಲಿಯೇ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಯಿತು. ನಂತರ ಸುವಿಧಾ ಆಪ್ ಮೂಲಕ ಎಲ್ಲರ ಮಾಹಿತಿಯನ್ನು ಸಂಗ್ರಹಿಸಿದ ಜಿಲ್ಲಾಡಳಿತ ಎಲ್ಲರನ್ನು ಅವರವರ ಊರುಗಳಿಗೆ ಬಸ್‍ಗಳಲ್ಲಿ ಕಳಿಸಿಕೊಟ್ಟಿತು. ಕಲಬುರಗಿ ರೈಲ್ವೇ ನಿಲ್ದಾಣದಿಂದ ವಲಸೆ ಕಾರ್ಮಿಕರನ್ನು ಹೊತ್ತ ಬಸ್‍ಗಳು ಚಿತ್ತಾಪುರ, ಚಂಚೋಳಿ, ಆಳಂದ, ಸೇಡಂ ತಾಲೂಕಿನ ಅವರವರ ಊರುಗಳಿಗೆ ಹೋಗಿದ್ದಾರೆ.

ವಲಸೆ ಕಾರ್ಮಿಕರನ್ನು ಅವರವರ ಊರುಗಳ ಶಾಲಾ, ಕಾಲೇಜು ಕಟ್ಟಡಗಳಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಆತಂಕದ ವಿಚಾರ ಅಂದರೆ ಕಲಬುರಗಿ ಜಿಲ್ಲೆಗೆ ವಾಪಸ್ಸಾದ ವಲಸಿಗ ಕಾರ್ಮಿಕರಲ್ಲಿ ಹಲವರು ಮುಂಬೈ ಸೋಂಕು ಪೀಡಿತ ಧಾರಾವಿ ಸ್ಲಂ ಪ್ರದೇಶದಲ್ಲಿ ಇಷ್ಟು ದಿನ ವಾಸವಿದ್ದರು. ಇದೀಗ ಅವರೆಲ್ಲ ಕಲಬುರಗಿ ಜಿಲ್ಲೆಗೆ ಆಗಮಿಸಿದ್ದು, ಇದರಲ್ಲಿ ಯಾರಿಗಾದರೂ ಸೋಂಕು ತಗುಲಿದರೆ ಏನು ಗತಿ ಎಂಬ ಭಯ ಕಲಬುರಗಿ ಜನತೆಯನ್ನು ಕಾಡುತ್ತಿದೆ.

ಹೀಗಾಗಿ ಈ ವಲಸಿಗ ಕಾರ್ಮಿಕರ ಮೇಲೆ ಆರೋಗ್ಯ ಇಲಾಖೆ ಹದ್ದಿನ ಕಣ್ಣಿಡಬೇಕಾಗಿದೆ. ಶಾಲಾ, ಕಾಲೇಜು ಕಟ್ಟಡಗಳಲ್ಲಿ ಸದ್ಯ ಕ್ವಾರಂಟೇನ್‍ನಲ್ಲಿರುವ ವಲಸೆ ಕಾರ್ಮಿಕರಿಗೆ ಅಗತ್ಯ ಸೌಲಭ್ಯಗಳನ್ನು ಜಿಲ್ಲಾಡಳಿತ ಕಲ್ಪಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮಾಡಬೇಕಿದೆ.


Spread the love

About Laxminews 24x7

Check Also

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆಗ್ರಹಿಸಿ ಪ್ರತ್ಯೇಕ ರಾಜ್ಯ ಧ್ವಜಾರೋಹಣ; ಬಿಗಿ ಪೊಲೀಸ್ ಬಂದೋಬಸ್ತ್

Spread the loveಒಂದೆಡೆ ಕಲಬುರಗಿಯಲ್ಲಿ ಪ್ರತ್ಯೇಕ ಕಲ್ಯಾಣ ಕರ್ನಾಟಕ ರಾಜ್ಯಕ್ಕಾಗಿ ಆಗ್ರಹಿಸಲಾಗುತ್ತಿದ್ದು, ಬೆಳಗಾವಿಯಲ್ಲಿ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ನಾಡದ್ರೋಹಿ ಎಂಇಎಸ್‌ನಿಂದ ಕರಾಳ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ