ಬೆಳಗಾವಿ : ನಾಗಲ್ಯಾಂಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ರಾಜ್ಯದ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಗೋಕಾಕ್ ತಾಲೂಕಿನ ಶಿವಾಪುರದ ಯೋಧ ಮಂಜುನಾಥ ಗೌಡನ್ನವರ (38) ಮೃತಪಟ್ಟಿರುವ ಯೋಧ.
ಕರ್ತವ್ಯದಲ್ಲಿದ್ದ ಇವರು ಗಸ್ತು ತಿರುಗುತ್ತಿದ್ದಾಗ ವಾಹನ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. 18 ವರ್ಷದಿಂದ ಮದ್ರಾಸ್ ಇಂಜಿನಿಯರಿಂಗ್ ಗ್ರೂಪ್ನಲ್ಲಿ ನೇಮಕಗೊಂಡು, ನಾಗಲ್ಯಾಂಡ್ ಗಡಿಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಗಸ್ತು ತಿರುಗುತ್ತಿದ್ದಾಗ ಅರಣ್ಯ ಪ್ರದೇಶದಲ್ಲಿ ಅಪಘಾತ ಸಂಭವಿಸಿ ದುರ್ಘಟನೆ ನಡೆದಿದೆ. ನಾಳೆ ಸಂಜೆ 6ಗಂಟೆಗೆ ಹುಟ್ಟೂರಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.