Breaking News
Home / Uncategorized / ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ.

ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ.

Spread the love

ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ

ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಗೋಕಾಕ ನಗರಸಭೆಗೆ 8 ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಂಜುಮನ್ ಇಸ್ಲಾಂ ಕಮಿಟಿ ಗೋಕಾಕ ಮತ್ತು ತಂಜೀಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ‌ ಮತ್ತು ಗ್ರಾಮ ದೇವತೆ ಜಾತ್ರಾ ಕಮಿಟಿ ಸದಸ್ಯರಾಗಿಯೂ ಜನಸೇವೆ ಮಾಡಿದ್ದಾರೆ.  ಜಾರಕಿಹೊಳಿ ಸಹೋದರರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು ಸಚಿವ ರಮೇಶ ಜಾರಕಿಹೊಳಿ. ಅವರ. ಬಲಗೈ ಬಂಟ ಎಂದು ಗುರುತಿಸಿಕೊಂಡಿದ್ದರು ಹಾಗೂ ಆಪ್ತರಾಗಿದ್ದರು.

ಊರಿನ ಗೌಡರು ಎಂದೇ ಖ್ಯಾತಿ ಪಡೆದಿದ್ದ ಎಸ್.ಎ ಖೊತವಾಲ ಅವರು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಖೋತವಾಲ ಅವರ ನಿಧನಕ್ಕೆ ಜಾರಕಿಹೊಳಿ ಸಹೋದರರರಾದ ರಮೇಶ ಜಾರಕಿಹೊಳಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ, ಲಖನ್ ಜಾರಕಿಹೊಳಿ ಮತ್ತು ಭೀಮಶಿ ಜಾರಕಿಹೋಳಿ ಸಂತಾಪ ವ್ಯಕ್ತಪಡಿಸಿದ್ದಾರೆ.ಹಾಗೂ ಜಲಸಂಪನ್ಮೂಲ ಸಚಿವರು ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ ಶ್ರೀ ರಮೇಶ್ ಜಾರಕಿಹೊಳಿ ತಮ್ಮ ಕಚೇರಿಯಲ್ಲಿ ಇಂದು ಖೂತ್ವಾಲ್ ಗೌಡರಿಗೆ ಭಾವಪೂರ್ವ ಶ್ರದ್ಧಾಂಜಲಿ ಸಲ್ಲಿಸಿ ಮತ್ತು ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು.


Spread the love

About Laxminews 24x7

Check Also

ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

Spread the love ಶಿರಸಿ: ಶಾಸಕ ಭೀಮಣ್ಣ ನಾಯ್ಕ ಹಾಗೂ ನಗರಸಭೆ ಪೌರಾಯುಕ್ತ ಕಾಂತರಾಜ ಹಾಗೂ ಸದಸ್ಯ ಖಾದರ ಆನವಟ್ಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ