Breaking News
Home / new delhi / ಗೋಕಾಕ : ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮತದಾರರ ಗುರುತಿನ ಚೀಟಿ ವಿತರಿಸುತ್ತಿರುವ ಗಣ್ಯರು.

ಗೋಕಾಕ : ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮತದಾರರ ಗುರುತಿನ ಚೀಟಿ ವಿತರಿಸುತ್ತಿರುವ ಗಣ್ಯರು.

Spread the love

ಗೋಕಾಕ: ನಮ್ಮ ದೇಶದ ಮತದಾರರನ್ನು ಸಬಲೀಕರಣ, ಜಾಗೃಕ, ಸುರಕ್ಷಿತ ಮತ್ತು ಮಾಹಿತಿದಾರರನ್ನಾಗಿ ಮಾಡುವುದು. ಚುನಾವಣೆಯ ಸಮಯದಲ್ಲಿ ದೇಶದ ಮತದಾರರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಹಾಗೂ ಜವಾಬ್ದಾರಿಯುರ ನಾಗರಿಕರಾಗಲು ಅವರಿಗೆ ಸಹಕರಿಸುವುದು ರಾಷ್ಟ್ರೀಯ ಮತದಾರರ ದಿನದ ಧ್ಯೇಯವಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ ಹೇಳಿದರು.
ಬುಧವಾರದಂದು ನಗರದ ಜೆಎಸ್‍ಎಸ್ ಕಾಲೇಜಿನಲ್ಲಿ ತಾಲೂಕಾಡಳಿತ, ತಾಪಂ, ನಗರಸಭೆ, ಶಿಕ್ಷಣ ಇಲಾಖೆ ಸೇರಿದಂತೆ ಇತರ ಇಲಾಖೆಗಳು ಆಶ್ರಯದಲ್ಲಿ ಹಮ್ಮಿಕೊಂಡ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಜಾಪ್ರಭುತ್ವದಲ್ಲಿ ಮತದಾರರು ಮಾಡುವ ಆಯ್ಕೆಯೇ ಅಂತಿಮ ನಿರ್ಧಾರವಾಗಿದ್ದು, ಮತದಾನ ನಮ್ಮ ಹಕ್ಕಾಗಿದ್ದು, ಇದರಿಂದ ನಾವು ವಂಚಿತವಾಗಬಾರದು. ಮತದಾರರಿಗೆ ಅನುಕೂಲವಾಗವ ಸಲುವಾಗಿ ಸರಕಾರ ವರ್ಷದಲ್ಲಿ ನಾಲ್ಕು ಬಾರಿ ಮತದಾರರ ಪಟ್ಟಿಯನ್ನು ಪರಿಷ್ಕøತ ಮಾಡುತ್ತಿದ್ದಾರೆ. ಮತದಾರರು ಇದರ ಲಾಭ ಪಡೆದುಕೊಳ್ಳಬೇಕು. ಯುವ ಮತದಾರರು ಜವಾಬ್ದಾರಿಯಿಂದ ಮತದಾನ ಮಾಡಬೇಕು. ದೇಶದ ಭವಿಷ್ಯ ನಿರ್ಧರಿಸುವ ಜವಾಬ್ದಾರಿ ಇಂದಿನ ಯುವ ಜನಾಂಗದ ಮೇಲಿದೆ ವಿದ್ಯಾರ್ಥಿಗಳು ಇದನ್ನು ಅರಿತು ಮತದಾನ ಮಾಡಬೇಕು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿ.ಎಲ್.ಓಗಳನ್ನು ಸತ್ಕರಿಸಲಾಯಿತು. ನೂತನವಾಗಿ ಮತದಾನದ ಹಕ್ಕು ಪಡೆದ ಯುವಕರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು.
ವೇದಿಕೆಯಲ್ಲಿ ಗ್ರೇಡ್-2 ತಹಶೀಲದಾರ ಎಲ್.ಎಚ್.ಭೋವಿ, ಪೌರಾಯುಕ್ತ ಶಿವಾನಂದ ಹಿರೇಮಠ, ಪ್ರಾಚಾರ್ಯರಾದ ಡಾ.ಆಶಾಲತಾ ತೇರದಾಳ, ರಾಜಶ್ರೀ ಬಿರಾದಾರ, ಆರ್.ಎಚ್.ಮುಲ್ಲಾ, ಎಂ.ಬಿ.ಪಾಟೀಲ, ನ್ಯಾಯವಾದಿ ಪ್ರೇಮಾ ಚಿಕ್ಕೋಡಿ, ಡಾ.ಆರ್.ಎಸ್.ಬಳಿಗಾರ, ಉಪಸ್ಥಿತರಿದ್ದರು.
ಡಾ. ಎಸ್.ಬಿ.ಹೊಸಮನಿ ನಿರೂಪಿಸಿದರು, ಅಭಯ ಆರ್ ಸ್ವಾಗತಿಸಿದರು, ಎ. ವ್ಹಿ. ಪಾಟೀಲ ವಂದಿಸಿದರು.


Spread the love

About Laxminews 24x7

Check Also

ಮುಂಬೈ-ಪುಣೆ ಹೆದ್ದಾರಿಯಲ್ಲಿ ಹೊತ್ತಿ ಉರಿದ ಐಷಾರಾಮಿ ಬಸ್

Spread the love ಮುಂಬೈ : ಮುಂಬೈ-ಪುಣೆ ಎಕ್ಸ್ಪ್ರೆಸ್ವೇಯಲ್ಲಿ ಶನಿವಾರ ಬೆಳಿಗ್ಗೆ ಖಾಸಗಿ ಐಷಾರಾಮಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅದರಲ್ಲಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ