Breaking News

ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ‌ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ

Spread the love

 

https://www.facebook.com/105350550949710/videos/756737581723043/?sfnsn=wiwspmo

 

ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ‌ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು.

ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ ಮನಿಷಾ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶ ಉಂಟಾಗಿದೆ. ಆದ್ರೂ ಕೂಡ ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಸಂತ್ರಸ್ತ ಬಾಲಕಿ ಕುಟುಂಬಸ್ಥರ ಧ್ವನಿ ಅಡಗಿಸುವ ಕೆಲಸಗಳು ನಡೆದಿವೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಪ್ರಕರಣ ಹೊಣೆ ಹೊತ್ತುಕೊಳ್ಳಬೇಕು.‌ ಕಾಮುಕರಿಗೆ ತಕ್ಷಣ ಗಲ್ಲು ಶಿಕ್ಷೆ ವಿಧಿಸಬೇಕು. ಇಲ್ಲವಾದಲ್ಲಿ ಮತ್ತಷ್ಟು ಉಗ್ರ ಹೋರಾಟಗಳು ನಡೆಸಲಾಗುವುದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸತೀಶ ಜಾರಕಿಹೊಳಿ ಅವರ ಪುತ್ರಿ, ಪ್ರಿಯಾಂಕಾ ಪುತ್ರ ರಾಹುಲ್, ವಿವೇಕ ಜತ್ತಿ, ರಿಯಾಜ್ ಚೌಗಲಾ, ರಾಮಣ್ಣಾ ಗುಳ್ಳಿ, ಪ್ರಕಾಶ ಡಾಂಗೆ, ಕಾಂಗ್ರೆಸ್ ಮುಖಂಡರಾದ ಜಯಶ್ರೀ ಮಾಳಗಿ, ಆಯಿಶಾ ಸನದಿ ಸೇರಿದಂತೆ ಮುಂತಾದವರು ಇದ್ದರು.


Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ