Breaking News
Home / new delhi / ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ‌ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ

ಉ.ಪ್ರದೇಶದ ಹತ್ರಾಸ್ ನಲ್ಲಿ ದಲಿತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ‌ ಪ್ರಕರಣ ಖಂಡಿಸಿ : ಗೋಕಾಕನಲ್ಲಿ ಶಾಸಕ ಸತೀಶ ಜಾರಕಿಹೊಳಿ ನೇತೃತ್ವದಲ್ಲಿ ಪ್ರತಿಭಟನೆ

Spread the love

 

ಗೋಕಾಕ : ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗೋಕಾಕ ಕೋರ್ಟ್ ಸರ್ಕಲ್ ನಲ್ಲಿ ಮೇಣದ ಬತ್ತಿ ಹಚ್ಚಿ ಪ್ರತಿಭಟನೆ ಮಾಡಿದರು ಈ ಸಂದರ್ಭದಲ್ಲಿ ಕೆ ಪಿ ಸಿ ಸಿ ಕಾರ್ಯಾಧ್ಯಕ್ಷರಾದ ಸತೀಶ್ ಜಾರಕಿಹೊಳಿಯವರು ಭಾಗವಹಿಸಿದರು.

Laxmi News 24×7 यांनी वर पोस्ट केले रविवार, ४ ऑक्टोबर, २०२०

 

ಗೋಕಾಕ ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಮುಖಂಡರು ದೀಪ‌ ಹಾಗೂ ಮೊಬೈಲ್ ಟಾರ್ಚ್ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದರು.

ಬಳಿಕ ಮಾಧ್ಯಮದವರೊಂದಿಗೆ ಶಾಸಕ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಬಾಲಕಿ ಮನಿಷಾ ಮೇಲೆ ನಡೆದ ಅತ್ಯಾಚಾರ, ಕೊಲೆ ಪ್ರಕರಣ ದೇಶದಾದ್ಯಂತ ಭಾರೀ ಆಕ್ರೋಶ ಉಂಟಾಗಿದೆ. ಆದ್ರೂ ಕೂಡ ಉತ್ತರ ಪ್ರದೇಶ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೇ, ಸಂತ್ರಸ್ತ ಬಾಲಕಿ ಕುಟುಂಬಸ್ಥರ ಧ್ವನಿ ಅಡಗಿಸುವ ಕೆಲಸಗಳು ನಡೆದಿವೆ. ಯುಪಿ ಸಿಎಂ ಯೋಗಿ ಆದಿತ್ಯನಾಥ್ ಅವರು ಪ್ರಕರಣ ಹೊಣೆ ಹೊತ್ತುಕೊಳ್ಳಬೇಕು.‌ ಕಾಮುಕರಿಗೆ ತಕ್ಷಣ ಗಲ್ಲು ಶಿಕ್ಷೆ ವಿಧಿಸಬೇಕು. ಇಲ್ಲವಾದಲ್ಲಿ ಮತ್ತಷ್ಟು ಉಗ್ರ ಹೋರಾಟಗಳು ನಡೆಸಲಾಗುವುದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸತೀಶ ಜಾರಕಿಹೊಳಿ ಅವರ ಪುತ್ರಿ, ಪ್ರಿಯಾಂಕಾ ಪುತ್ರ ರಾಹುಲ್, ವಿವೇಕ ಜತ್ತಿ, ರಿಯಾಜ್ ಚೌಗಲಾ, ರಾಮಣ್ಣಾ ಗುಳ್ಳಿ, ಪ್ರಕಾಶ ಡಾಂಗೆ, ಕಾಂಗ್ರೆಸ್ ಮುಖಂಡರಾದ ಜಯಶ್ರೀ ಮಾಳಗಿ, ಆಯಿಶಾ ಸನದಿ ಸೇರಿದಂತೆ ಮುಂತಾದವರು ಇದ್ದರು.


Spread the love

About Laxminews 24x7

Check Also

ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಹೊಸ ಟ್ವಿಸ್ಟ್‌.! ಎಲ್ಲರಿಗಿಂತ ಮೊದಲೇ ಡಿಕೆ ಬ್ರದರ್ಸ್‌ʼಗೆ ತಲುಪಿತ್ತಂತೆ.!?

Spread the love ಹಾಸನ : ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿರುವ ಹಾಸನದ ಹಾಲೀ ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ