Breaking News

ಗೋಕಾಕ: ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ

Spread the love

ಗೋಕಾಕ: ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು.

ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ. ನಿರಂತರ ಶ್ರಮವಹಿಸಿ ವಿಜ್ಞಾನಿಗಳು ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಯಶಸ್ವುಯಾಗಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಚಿಕ್ಕೋಡಿ ಡಿಎಚ್ ಓ ಎಸ್.ಎಸ್.ಗಡೇದ, ಗೋಕಾಕ ತಾಲೂಕಾ ನೂಡಲ್ ಅಧಿಕಾರಿ ಡಾ.ಎಂ.ಎಸ್. ಪಲ್ಲೇದ್, ಪ್ರಕಶ ಹೊಳೆಪ್ಪಗೋಳ, ಗೋಕಾಕ ತಾಲೂಕು ವೈದ್ಯಾಧಿಕಾರಿಗಳಾದ ರವೀಂದ್ರ ಅಂಟೀನ್, ಡಾ.ಎಂ.ಎಸ್. ಕೊಪ್ಪದ ಮುಂತಾದವರು ಇದ್ದರು.

 

 


Spread the love

About Laxminews 24x7

Check Also

ಫಿನಾಯಿಲ್ ಮಾರಾಟ ಮಾಡುತ್ತ ಚಿನ್ನದಂಗಡಿ ದೋಚಿದ್ದ ರಾಜಸ್ಥಾನಿ ಗ್ಯಾಂಗ್

Spread the loveಬೆಂಗಳೂರು : ಫಿನಾಯಿಲ್ ಸರಬರಾಜು ಮಾಡುತ್ತ ಚಿನ್ನದಂಗಡಿ ದೋಚಿದ್ದ ಐವರು ಆರೋಪಿಗಳನ್ನ ಕೆ. ಆರ್. ಪುರಂ ಠಾಣೆ ಪೊಲೀಸರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ