Home / ಜಿಲ್ಲೆ / ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ 5ಲಕ್ಷ ರೂಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ
????????????????????????????????????

ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಕುಟುಂಬಕ್ಕೆ 5ಲಕ್ಷ ರೂಗಳ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಗೋಕಾಕ: ವಿದ್ಯುತ್ ಅವಘಡದಲ್ಲಿ ಮೃತಪಟ್ಟ ಮೂಡಲಗಿ ತಾಲೂಕಿನ ಅರಭಾವಿ (ಹಟ್ಟಿಗುಡ್ಡ) ಪಟ್ಟಣದ ಕುತುಬಸಾಬ ಬಾಗವಾನ ಅವರ ವಾರಸುದಾರರಿಗೆ ಇಂಧನ ಇಲಾಖೆಯಿಂದ 5ಲಕ್ಷ ರೂಗಳ ಪರಿಹಾರಧನದ ಚೆಕ್‍ನ್ನು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಕೆಎಮ್‍ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಇಂಧನ ಇಲಾಖೆಯಿಂದ ಮಂಜೂರಾದ ಪರಿಹಾರ ಧನವನ್ನು ಕುಟುಂಬದವರು ಸದ್ಭಳಕೆ ಮಾಡಿಕೊಳ್ಳಬೇಕು. ಈ ಹಣವನ್ನು ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಬ್ಯಾಂಕ್‍ನಲ್ಲಿ ಠೇವಣಿಯಾಗಿಟ್ಟು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಕುಟುಂಬದವರು ಮುಂದಾಗಬೇಕು. ಜೀವ ಅಮೂಲ್ಯವಾದದ್ದು ಆದ್ದರಿಂದ ಇಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ವಿದ್ಯುತ್ ಅವಘಡಗಳು ಸಂಭವಿಸದಂತೆ ಜಾಗೃತಿಯನ್ನು ವಹಿಸಬೇಕು. ಕೃಷಿಗಾಗಿ ವಿದ್ಯುತ್ ಬಳಕೆ ಮಾಡುತ್ತಿರುವ ಸಂದರ್ಭದಲ್ಲಿ ರೈತರು ಮುಂಜಾಗೃತೆಯಿಂದ ಕೆಲಸವನ್ನು ಮಾಡಬೇಕು. ಯಾವುದೇ ಸಂದರ್ಭವಿರಲಿ ವಿದ್ಯುತ್ ಬಳಕೆ ಸಂದರ್ಭದಲ್ಲಿ ನಿರ್ಲಕ್ಷ್ಯವನ್ನು ಮಾಡಬಾರದೆಂದು ಅವರು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಘಟಪ್ರಭಾ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರ ಕಿರಣ ಸಣ್ಣಕ್ಕಿ, ಮೂಡಲಗಿ ಹೆಸ್ಕಾಂನ ಎಇಇ ಎಮ್.ಎಸ್.ನಾಗನ್ನವರ, ಅರಭಾವಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷೆ ಪದ್ಮಾವತಿ ದೇವುಗೋಳ, ಸದಸ್ಯ ಕುಮಾರ ಪೂಜೇರಿ, ಜಿ.ಪಂ ಮಾಜಿ ಸದಸ್ಯ ಪರಮೇಶ್ವರ ಹೊಸಮನಿ, ಅರಭಾವಿ ಬಿಜೆಪಿ ಮಂಡಲ ಅಲ್ಪ ಸಂಖ್ಯಾತ ಮೋರ್ಚಾ ಅಧ್ಯಕ್ಷ ಇಕ್ಬಾಲ ಸರ್ಕಾವಸ್, ರಮೇಶ ಬಿಲಕುಂದಿ, ಮಹಾದೇವ ಝಲ್ಲಿ, ಬಸು ಈಳಿಗೇರ ಹಾಗೂ ಬಾಗವಾನ ಕುಟುಂಬದವರು ಉಪಸ್ಥಿತರಿದ್ದರು.
ಕಳೆದ ವರ್ಷದ ಮೇ 7ರಂದು ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಕುತುಬಸಾಬ ಬಾಗವಾನ ಅವರು ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ