Breaking News

ನೆಲಸಮಗೊಳಿಸಿರುವ ಬಡವರ ಮನೆ ನಿರ್ಮಿಸಿ ಕೊಡಿ : ಅಶೋಕ ಪೂಜಾರಿ

Spread the love

ಗೋಕಾಕ : ತಾಲ್ಲೂಕಿನ ಧುಪದಾಳ ಗ್ರಾಮದಲ್ಲಿ ನೆಲಸಮ ಮಾಡಿದ ಬಡವರ ಮನೆಗಳನ್ನು ಸರ್ಕಾರದಿಂದ ಶೀಘ್ರದಲ್ಲಿ ಮರು ನಿರ್ಮಾಣ ಮಾಡಬೇಕು ಎಂದು ಜೆಡಿಎಸ್ ಮುಖಂಡ ಅಶೋಕ ಪೂಜಾರಿ ಆಗ್ರಹಿಸಿದರು.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಧುಪದಾಳ( ನವಿಲಮಾಳ) ಸಮೀಪದಲ್ಲಿರುವ ಸರ್ವೆ ನಂ.173/1ರಲ್ಲಿ 140 ಎಕರೆ ಜಮೀನು ಪಾಳು ಬಿದ್ದಿದೆ. ಈ ಜಾಗದಲ್ಲಿ ವಸತಿ ರಹಿತ ಬಡವರು, ಕೂಲಿ ಕಾರ್ಮಿಕರು , ಗೋಕಾಕ್ ಮಿಲ್ ಕಾರ್ಮಿಕರು ಸುಮಾರು 8 ವರ್ಷಗಳಿಂದ ಮನೆ ಕಟ್ಟಿಕೊಂಡಿದ್ದಾರೆ.

ಇಲ್ಲಿ ನಿರ್ಮಾಣವಾದ ಮನೆಗಳಿಗೆ ಸ್ಥಳೀಯ ಗ್ರಾಮ ಪಂಚಾಯಿತಿ ವಿದ್ಯುತ್ , ನೀರು ಸೇರಿ ಎಲ್ಲ ಸೌಕರ್ಯ ಕಲ್ಪಿಸಿದ್ದಾರೆ. ಆದರೆ ಅವುಗಳನ್ನು ಸಕ್ರಮ ಮಾಡಿಕೊಡದೆ, ಸುಮಾರು 32 ಮನೆಗಳನ್ನು ತಹಶೀಲ್ದಾರ್ ತೆರವುಗೊಳಿಸಿದ್ದಾರೆ. ಈ ಕ್ರಮ ಸರಿಯಲ್ಲ. ಆದಷ್ಟು ಬೇಗ ತೆರವುಗೊಳಿಸಿದ ಮನೆಗಳನ್ನು ನಿರ್ಮಿಸಿ, ಸಕ್ರಮ ಮಾಡಿಕೊಡಬೇಕು ಎಂದು ಆಗ್ರಹಿಸಿದರು.

ಗೋಕಾಕ ಮಿಲ್ ಪ್ರದೇಶದಲ್ಲಿ 350 ಎಕರೆ ಜಾಗವನ್ನು ಗುತ್ತಿಗೆ ಆಧಾರದಲ್ಲಿ ನೀಡಲಾಗಿದೆ. ಅಲ್ಲಿ 20×30 ನಿವೇಶನಗಳನ್ನು ಮಾಡಿ ಬಡವರಿಗೆ, ಕೂಲಿ ಕಾರ್ಮಿಕರು, ಮನೆ ಇಲ್ಲದವರಿಗೆ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಆದರೂ ಸಹ ಇಲ್ಲಿಯವರೆಗೂ ನೀಡಿಲ್ಲ. ಆದಷ್ಟು ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ಸರ್ಕಾರ ಹಾಗೂ ಜಿಲ್ಲಾಡಳಿತಕ್ಕೆ ಎಚ್ಚರಿಸಿದ್ದಾರೆ.

ಮುಖಂಡರುಗಳಾದ ಸುರೇಶ ಮರಲಿಂಗನವರ, ಶಬ್ಬಿರ ಅತ್ತಾರ, ದಸ್ತಗೀರ ಪೈಲವಾನ, ಸಿ.ಬಿ.ಗಿಡನ್ನವರ, ಪ್ರಕಾಶ ಬಾಗೋಜಿ, ಚನ್ನಬಸಪ್ಪ ರುದ್ರಾಪೂರ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಂಗಳೂರಿನಲ್ಲಿ ರಾತ್ರಿಯಿಡೀ ಮಳೆಯ ಅಬ್ಬರ

Spread the love ಬೆಂಗಳೂರು: ನಗರದಲ್ಲಿ ತಡರಾತ್ರಿ ನಿರಂತರವಾಗಿ ಸುರಿದ ಮಳೆ ಹಲವೆಡೆ ಅವಾಂತರಗಳನ್ನು ಸೃಷ್ಟಿಸಿದೆ. ಶುಕ್ರವಾರ ರಾತ್ರಿ 9 ಗಂಟೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ