Breaking News

ಶೋಕಿಗಾಗಿ ಕಳ್ಳತನ- ಚಿನ್ನಾಭರಣ ಮಾರಿ ಗೋವಾ ಟ್ರಿಪ್ ಮಾಡುತ್ತಿದ್ದವರು ಅಂದರ್

Spread the love

ಮೈಸೂರು: ಶೋಕಿಗಾಗಿ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಸದಸ್ಯರನ್ನು ಮೈಸೂರು ಉದಯಗಿರಿ ಠಾಣೆಯ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ಮೂವರು ಖತರ್ನಾಕ್ ಮನೆಗಳ್ಳರು ಸೇರಿದಂತೆ 6 ಜನರ ಬಂಧಿಸಿದ್ದು, ಸೈಯದ್ ಅಲೀಂ (30) ಉಮ್ಮರ್ ಪಾಷಾ (30) ವಸೀಂ ಪಾಷಾ (27) ಬಂಧಿತ ಮನೆಗಳ್ಳರು. ಕಳುವು ಮಾಲುಗಳನ್ನು ಮಾರಾಟ ಮಾಡಲು ಸಹಕರಿಸಿದ ಮಂಜುನಾಥ್, ಆಧಿಲ್ ಪಾಷಾ ಹಾಗೂ ಅರ್ಧ ಬೆಲೆಗೆ ಚಿನ್ನಾಭರಣ ಖರೀದಿಸುತ್ತಿದ್ದ ದೇವೇಂದ್ರ ಸಿಂಗ್ ನನ್ನು ಬಂಧಿಸಲಾಗಿದೆ. ಒಟ್ಟು 7 ಮನೆ ಕಳ್ಳತನ ಪ್ರಕರಣಗಳು ಪತ್ತೆಯಾಗಿವೆ.

ಬಂಧಿತರಿಂದ 11 ಲಕ್ಷ ರೂ. ಮೌಲ್ಯದ 220 ಗ್ರಾಂ. ಚಿನ್ನಾಭರಣ, 3 ಲಕ್ಷ ರೂ. ಮೌಲ್ಯದ 5 ಕೆ.ಜಿ. ಬೆಳ್ಳಿ ಪದಾರ್ಥಗಳು ಹಾಗೂ 3 ಲಕ್ಷ ರೂ. ಮೌಲ್ಯದ ಡೈಮಂಡ್ ಆಭರಣ, ಕೃತ್ಯಕ್ಕೆ ಬಳಸಿದ ಆಟೋ ಹಾಗೂ ಕಳವು ಮಾಲನ್ನು ಮಾರಾಟ ಮಾಡಿ ಖರೀದಿಸಿದ್ದ ಅಪಾಚಿ ಸ್ಕೂಟರ್ ನ್ನು ಪೊಲೀಸರು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರು ಆರೋಪಿಗಳನ್ನು ವಿಚಾರಣೆ ನಡೆಸಿದ್ದು, ಈ ವೇಳೆ ಶೋಕಿಗಾಗಿ ಕಳವು ಮಾಡುತ್ತಿದ್ದ ವಿಚಾರ ಬೆಳಕಿಗೆ ಬಂದಿದೆ. ಕಳವು ಮಾಡಿದ ಹಣದಿಂದ ಆರೋಪಿಗಳು ಗೋವಾ, ಮುಂಬೈಗೆ ತೆರಳಿ ಶೋಕಿ ಮಾಡುತ್ತಿದ್ದರು. ಈ ಹಿಂದೆ ಉದಯಗಿರಿ, ಮಂಡಿ ಠಾಣಾ ವ್ಯಾಪ್ತಿಯಲ್ಲಿ ಕಳ್ಳತನ ಮಾಡಿ ಜೈಲು ವಾಸ ಅನುಭವಿಸಿದ್ದರು. ಇದೀಗ ಉದಯಗಿರಿ ಇನ್ಸ್ ಪೆಕ್ಟರ್ ಪೂಣಚ್ಚ ಹಾಗೂ ಸಬ್ ಇನ್ಸ್ ಪೆಕ್ಟರ್ ಜೈ ಕೀರ್ತಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ.

 


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ