Breaking News

ಸರ್ಕಾರಿ ಬಸ್‌ಗಳ ಮೇಲಿನ ಜಾಹೀರಾತಿಗೆ ಬ್ರೇಕ್ – 15 ದಿನದೊಳಗೆ ಜಾಹೀರಾತು ತೆರವಿಗೆ ಸೂಚನೆ

Spread the love

ಬೆಂಗಳೂರು: ಸರ್ಕಾರಿ ಸಾರಿಗೆ ಬಸ್‌ಗಳ ಮೇಲೆ ತಂಬಾಕು ಜಾಹೀರಾತು  ವಿರುದ್ಧ ಜನಾಕ್ರೋಶ ಹೆಚ್ಚಾಗಿತ್ತು. ಬಸ್‌ಗಳ ಮೇಲಿನ ಜಾಹೀರಾತು ಪೋಸ್ಟರ್‌ಗಳನ್ನ ಕಿತ್ತೆಸೆದು ಸರ್ಕಾದ ವಿರುದ್ಧ ಸಿಡಿದೆದ್ದಿದ್ದರು. ಈಗ ಜನಾಕ್ರೋಶಕ್ಕೆ ಕೆಎಸ್‌ಆರ್‌ಟಿಸಿ ಮಣಿದಿದೆ.

ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್‌ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತಿನ ಪೋಸ್ಟರ್ ಅಂಟಿಸೋದರ ವಿರುದ್ಧ ಒಂದು ಆಂದೋಲನವೇ ಶುರುವಾಗಿತ್ತು. ಸಾರ್ವಜನಿಕರು, ಸಂಘಟನೆಗಳು ಬಸ್‌ಗಳಿಗೆ ಅಂಟಿಸಲಾಗಿದ್ದ ಜಾಹೀರಾತು ಪೋಸ್ಟರ್ ಕಿತ್ತೆಸೆಯೋ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು. ಈ ರೀತಿಯ ಜಾಹೀರಾತುಗಳಿಗೆ ಕಡಿವಾಣ ಹಾಕಬೇಕು ಅಂತ ಆಗ್ರಹ ಕೂಡ ಮಾಡಿದ್ದರು. ಸದ್ಯ ಜನಾಕ್ರೋಶಕ್ಕೆ ಮಣಿದಿರುವ ಸರ್ಕಾರ, ಕೂಡಲೇ ತಂಬಾಕು ಉತ್ಪನ್ನಗಳನ್ನ ಪ್ರಮೋಟ್ ಮಾಡುವ ಜಾಹಿರಾತುಗಳ ತೆರವಿಗೆ ಕೆಎಸ್‌ಆರ್‌ಟಿಸಿ ಎಂಡಿಗೆ ಸೂಚನೆ ನೀಡಿದೆ.

ರಾಜ್ಯದ 2 ಸಾವಿರ ಬಸ್‌ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತು ಪೋಸ್ಟರ್ ಅನ್ನು ಅಳವಡಿಕೆ ಮಾಡಿದ್ದಾರೆ. 15 ದಿನಗಳ ಒಳಗೆ ಎಲ್ಲಾ ಬಸ್‌ಗಳ ಮೇಲಿನ ಜಾಹೀರಾತು ತೆರವಿಗೆ ಸೂಚನೆ ನೀಡಲಾಗಿದೆ. ಇನ್ನೂ ಜಾಹೀರಾತು ನೀಡಿದ ಕಂಪನಿಗಳ ಜೊತೆಯೂ ಮಾತನಾಡಿದ್ದು, ಜಾಹೀರಾತುಗಳ ತೆರವು ಮಾಡುವುದಕ್ಕೆ ಕಂಪನಿಗಳು ಒಪ್ಪಿಕೊಂಡಿವೆ. ಆಯಾ ಡಿಪೋಗಳಲ್ಲಿ ಡಿಪೋ ಮ್ಯಾನೆಜರ್‌ಗಳ ಜೊತೆ ಮಾತನಾಡಿದ್ದು, ತಕ್ಷಣಕ್ಕೆ ತೆರವು ಮಾಡುವಂತೆ ಸೂಚಿಸಲಾಗಿದೆ.

ರಾಜ್ಯದ ಹಲವು ಬಸ್ ನಿಲ್ದಾಣಗಳಲ್ಲಿ ಪೋಸ್ಟರ್‌ಗಳನ್ನ ಕಿತ್ತೆಸೆಯುವ ಪ್ರಕರಣಗಳು ಹೆಚ್ಚಾಗ್ತಿದ್ದಂತೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಲ್ಲಾ ತಂಬಾಕು ಉತ್ಪನ್ನಗಳ ಜಾಹೀರಾತುಗಳ ತೆರವಿಗೆ ಸೂಚಿಸಿದ್ದಾರೆ. ಸಚಿವರ ನಿರ್ದೇಶನದ ಮೇರೆಗೆ ವಾರ್ಷಿಕವಾಗಿ 60 ಕೋಟಿ ಆದಾಯ ಬರುತ್ತಿದ್ದರೂ ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ