ಬೆಂಗಳೂರು: ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಅವರು ವಿಧಿವಶರಾದ ಹಿನ್ನೆಲೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೆಚ್ಡಿಡಿ ಅವರನ್ನು ಭೇಟಿಯಾಗಿ, ಸಾಂತ್ವನ ಹೇಳಿದ್ದಾರೆ.
ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿದ ರಾಜ್ಯಪಾಲರು ದೇವೇಗೌಡರಿಗೆ ಸಾಂತ್ವನ ಹೇಳಿದ್ದಾರೆ. ರಾಜ್ಯಪಾಲರ ಭೇಟಿ ವೇಳೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ಉಪಸ್ಥಿತರಿದ್ದರು.
ಇನ್ನೂ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕೂಡ ಇಂದು (ಜು.24) ಪದ್ಮನಾಭನಗರ ನಿವಾಸಕ್ಕೆ ಭೇಟಿ ನೀಡಿ, ದೇವೇಗೌಡರಿಗೆ ಸಾಂತ್ವನ ಹೇಳಿದ್ದಾರೆ.
Laxmi News 24×7