Breaking News

ರಾಜಕೀಯ ಬೆಳವಣಿಗೆ ಮಧ್ಯೆ ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್‌

Spread the love

ಬೆಂಗಳೂರು: ರಾಜ್ಯದಲ್ಲಿ ತೀವ್ರ ರಾಜಕೀಯ ಬೆಳವಣಿಗೆಗಳು ನಡೆಯುತ್ತಿರುವ ಬೆನ್ನಲ್ಲೇ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಧ್ಯರಾತ್ರಿ ದಿಢೀರ್ ಮುಂಬೈಗೆ ಪ್ರಯಾಣ ಬೆಳೆಸಿದ್ದಾರೆ.

ಹತ್ತಿರ ಸಂಬಂಧಿಕರೊಬ್ಬರ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ರಾಜ್ಯಪಾಲರು ತುರ್ತಾಗಿ ಮುಂಬೈಗೆ ತೆರಳಿದ್ದಾರೆ ಎಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದೆ. ಬುಧವಾರ ತಡರಾತ್ರಿ 11:45 ರ ಸುಮಾರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅವರು ಮುಂಬೈಗೆ ವಿಮಾನದ ಮೂಲಕ ಪ್ರಯಾಣ ಬೆಳೆಸಿದ್ದಾರೆ.

ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ  ಅವರು ಇಂದು ರಾಜ್ಯಪಾಲರ ಭೇಟಿಗೆ ಸಮಯಾವಕಾಶ ಕೋರಿದ್ದರು. ಇದಕ್ಕೆ ಸ್ಪಂದಿಸಿದ್ದ ಲೋಕಭವನ ಗುರುವಾರ ಬೆಳಗ್ಗೆ 11:30 ಕ್ಕೆ ಹಾಗೂ ಮಧ್ಯಾಹ್ನ 3 ಗಂಟೆಯ ನಂತರ ಭೇಟಿಗೆ ಅವಕಾಶವನ್ನೂ ಕಲ್ಪಿಸಿತ್ತು. ಸಿಎಂ ಭೇಟಿಗೆ ಕೆಲವೇ ಗಂಟೆಗಳು ಬಾಕಿ ಇರುವಾಗ ರಾಜ್ಯಪಾಲರು ಮಧ್ಯರಾತ್ರಿಯೇ ರಾಜಧಾನಿ ತೊರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.

ರಾಜ್ಯಪಾಲರು ಇಂದೇ ಮುಂಬೈನಿಂದ ಮರಳಿ ಬರುತ್ತಾರಾ ಎನ್ನುವುದರ ಬಗ್ಗೆ ಖಚಿತತೆ ಇಲ್ಲ. ಒಂದು ವೇಳೆ ಮರಳಿ ಬಂದರೂ ಮಧ್ಯಾಹ್ನ 3 ಗಂಟೆಯ ನಂತರ ಸಿದ್ದರಾಮಯ್ಯ ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಫುಟ್‌ಪಾತ್‌ನಲ್ಲಿ ಬೈಕ್ ಚಲಾಯಿಸಿದ್ರೆ 5,000 ರೂ. ದಂಡ: ಕೃಷ್ಣ ಬೈರೇಗೌಡ

Spread the loveಬೆಂಗಳೂರು: ಪಾದಾಚಾರಿ ಮಾರ್ಗದಲ್ಲಿ ಮೋಟಾರು ವಾಹನ ಚಲಾಯಿಸುವವರಿಗೆ ವಿಧಿಸುತ್ತಿದ್ದ ದಂಡದ  ಮೊತ್ತವನ್ನು 5,000 ರೂ.ಗಳಿಗೆ ಹೆಚ್ಚಿಸುವಂತೆ ಒತ್ತಾಯಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ