Breaking News

ಸರ್ಕಾರಿ ಬಸ್ ತಪಾಸಣೆ ಮಾಡುತ್ತಿದ್ದ ನಕಲಿ ಸಾರಿಗೆ ಅಧಿಕಾರಿಯನ್ನು ಕಂಡಕ್ಟರ್ ಪತ್ತೆ ಹಚ್ಚಿ ಮೇಲಾಧಿಕಾರಿಗಳಿಗೆ ಒಪ್ಪಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

Spread the love

ಕೊಪ್ಪಳ: ಸರ್ಕಾರಿ ಬಸ್ ತಪಾಸಣೆ ಮಾಡುತ್ತಿದ್ದ ನಕಲಿ ಸಾರಿಗೆ ಅಧಿಕಾರಿಯನ್ನು ಕಂಡಕ್ಟರ್ ಪತ್ತೆ ಹಚ್ಚಿ ಮೇಲಾಧಿಕಾರಿಗಳಿಗೆ ಒಪ್ಪಿಸಿದ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ತಾಲೂಕಿನ ಹುಲಗಿಯಿಂದ ಗಂಗಾವತಿ ಕಡೆ ಹೊರಟಿದ್ದ ಬಸ್‍ನ್ನು ತಪಾಸಣೆ ಮಾಡುವ ನೆಪದಲ್ಲಿ ಬಂದ ಆತ, ಟಿಕೆಟ್ ಮತ್ತು ಕ್ಯಾಶ್ ತಪಾಸಣೆ ಮಾಡಿದ್ದಾನೆ. ಈ ವೇಳೆ ಬಸ್ ಕಂಡೆಕ್ಟರ್ ಗೆ ಸಂಶಯ ಬಂದು ವಿಚಾರಣೆ ಮಾಡಿದಾಗ ನಕಲಿ ಅಧಿಕಾರಿ ಎಂದು ತಿಳಿದು ಬಂದಿದೆ.

ಬಸ್ ಪ್ರಯಾಣಿಕನ ಸೋಗಿನಲ್ಲಿ ಬಸ್ ಹತ್ತಿದ ಅಸಾಮಿ ನಂತರ ಕಂಡಕ್ಟರ್ ಬಳಿ ಬಂದು ನಾನು ತನಿಖಾಧಿಕಾರಿ ಎಂದು ಹೇಳಿ ಟಿಕೆಟ್ ಮಷಿನ್ ಪಡೆದುಕೊಂಡಿದ್ದಾನೆ. ಟೆಕೆಟ್ ಮತ್ತು ಹಣ ಎಲ್ಲವನ್ನು ಪರಿಶೀಲನೆ ಮಾಡಿದ್ದಾನೆ. ನಂತರ ನೀನು ಟಿಕೆಟ್ ಸರಿಯಾಗಿ ನೀಡಿಲ್ಲ. ನಿನ್ನ ಮೇಲೆ ಕೇಸ್ ಹಾಕುತ್ತೇನೆ ಎಂದು ಕಂಡಕ್ಟರ್ ಗೆ ಅವಾಜ್ ಹಾಕಿದ್ದಾನೆ. ಜೊತೆಗೆ 500 ರೂ. ದುಡ್ಡನ್ನು ಪಡೆದುಕೊಂಡಿದ್ದಾನೆ.

ಈ ವೇಳೆ ಅಸಾಮಿಯ ನಡುವಳಿಕೆ ನೋಡಿ ಅನುಮಾನಗೊಂಡ ಕಂಡಕ್ಟರ್, ಆತನನ್ನು ಪಶ್ನೆ ಮಾಡಲು ಶುರು ಮಾಡಿದ್ದಾರೆ. ನೀನು ನಮ್ಮ ಸಾರಿಗೆ ಇಲಾಖೆ ಅಧಿಕಾರಿನಾ? ನಿನ್ನ ಗುರುತಿನ ಚೀಟಿ ತೋರಿಸು ಎಂದು ಕೇಳಿದ್ದಾರೆ. ಈ ವೇಳೆ ಬೇರೆ ಏನೋ ಸಬೂಬು ಹೇಳಿ ಹೊರಹೋಗಲು ನೋಡಿದ ಆತನನ್ನು ಹಿಡಿದ ಕಂಡಕ್ಟರ್, ಆತನನ್ನು ಸಾರಿಗೆ ಇಲಾಖೆ ಮೇಲಾಧಿಕಾರಿಗಳಿಗೆ ಒಪ್ಪಿಸಿದ್ದಾರೆ.

ಸಿಕ್ಕಿಬಿದ್ದ ವ್ಯಕ್ತಿ ಆಂಧ್ರ ಮೂಲದವನು ಎಂದು ತಿಳಿದುಬಂದಿದ್ದು, ವಿಚಾರಣೆ ಮಾಡುವ ವೇಳೆ ನಾನು ನಕಲಿ ಅಧಿಕಾರಿ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಕೂಡಲೆ ನಕಲಿ ಅಧಿಕಾರಿಯನ್ನು ಕಂಡೆಕ್ಟರ್ ಹನುಮೇಶ್ ಮೇಲಾಧಿಕಾರಿ ವಶಕ್ಕೆ ಒಪ್ಪಿಸಿದ್ದಾರೆ


Spread the love

About Laxminews 24x7

Check Also

1200 ರೈತರ ಆತ್ಮಹತ್ಯೆ: ಕಾಂಗ್ರೆಸ್ ಆಡಳಿತದಲ್ಲಿ ರೈತರ ಜೀವಕ್ಕಿಲ್ಲ ಬೆಲೆ- ಪ್ರಹ್ಲಾದ್ ಜೋಶಿ

Spread the love ಬೆಂಗಳೂರು ಜುಲೈ 26: ರಾಜ್ಯದಲ್ಲಿ ಕಳೆದ 15 ತಿಂಗಳಲ್ಲಿ 1200ಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ