Breaking News

ಆರೋಗ್ಯಾಧಿಕಾರಿಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲಿದೆ: ಸಚಿವ ಸಿ.ಸಿ ಪಾಟೀಲ

Spread the love

ಗದಗ: ಮುಂಡರಗಿ ತಾಲ್ಲೂಕು ವೈದ್ಯಾಧಿಕಾರಿಗೆ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವು ಭರಿಸಲಿದೆ ಎಂದು ಗದಗ ಜಿಲ್ಲೆ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಸಚಿವರು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜಾವಿದ್ ಅಕ್ತರ್ ಅವರೊಂದಿಗೆ ಮಾತನಾಡಿದ್ದು, ಅವರು ಸ್ಪರ್ಶ ಆಸ್ಪತ್ರೆಯ ಮುಖ್ಯಸ್ಥರೊಂದಿಗೆ ಈಗಾಗಲೇ ಮಾತನಾಡಿದ್ದು, ಸರ್ಕಾರವು ಚಿಕಿತ್ಸೆ ವೆಚ್ಚ ಪಾವತಿಸಲಿದೆ.

ಸರ್ಕಾರವು ಕೊರೊನಾ ವಾರಿಯರ್ಸ್ ಜೊತೆಗೆ ಇರಲಿದೆ ಎಂದು ಗದಗ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ತಿಳಿಸಿದ್ದಾರೆ.

 


Spread the love

About Laxminews 24x7

Check Also

ಮಹಿಷ ದಸರಾ | ಯಾರಿಗೂ ತೊಂದರೆ ಆಗದಂತೆ ಮಾಡಿಕೊಳ್ಳಬಹುದು: ಮಹದೇವಪ್ಪ

Spread the love ಮೈಸೂರು: ‘ಯಾರಿಗೂ, ಯಾವ ತೊಂದರೆಯೂ ಆಗದಂತೆ ಯಾರು ಬೇಕಾದರೂ ಅವರವರ ಧಾರ್ಮಿಕ ಆಚರಣೆ ಮಾಡಿಕೊಳ್ಳಬಹುದು’ ಎಂದು ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ