Breaking News

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ರೌಡಿಶೀಟರ್‌ ಕಾಲಿಗೆ ಗುಂಡೇಟು

Spread the love

ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದಲ್ಲಿ ಗುಂಡಿನ ಸದ್ದು ಕೇಳಿಬಂದಿದೆ. ರೌಡಿಶೀಟರ್‌ ಕಾಲಿಗೆ ಪೊಲೀಸರು ಗುಂಡೇಟು ನೀಡಿದ್ದಾರೆ.

ಜೀವ (19) ಗುಂಡೇಟು ತಿಂದ ಆರೋಪಿ. ಸಿಂಗೇನಾ ಅಗ್ರಹಾರದ ತೋಪಿನಲ್ಲಿ ಹೆಬ್ಬಗೋಡಿ ಪೊಲೀಸರು ಫೈರಿಂಗ್‌ ಮಾಡಿದ್ದಾರೆ. ಗಾಯಗೊಂಡಿರುವ ಆರೋಪಿಯನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದ್ದಾರೆ.

ಹೆಬ್ಬಗೋಡಿಯ ತಿರುಪಾಳ್ಯದಲ್ಲಿ ರೌಡಿಶೀಟರ್‌ ಜೀವ ವಾಸವಾಗಿದ್ದಾನೆ. ಕೊಲೆ, ಸುಲಿಗೆ, ದರೋಡೆ ಪ್ರಕರಣಗಳ ಪ್ರಮುಖ ಆರೋಪಿಯಾಗಿದ್ದಾನೆ. ಸಬ್‌ ಇನ್‌ಸ್ಪೆಕ್ಟರ್‌ ಅಯ್ಯಪ್ಪ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಕಳೆದ ವಾರ ಹೆಬ್ಬಗೋಡಿ ಮತ್ತು ಎಲೆಕ್ಟ್ರಾನಿಕ್ ಸಿಟಿ ಭಾಗದಲ್ಲಿ ಆರೋಪಿ ದರೋಡೆ ಮಾಡಿದ್ದ. ನಟೋರಿಯಸ್ ರೌಡಿಶೀಟರ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ಈ ವೇಳೆ ಪೊಲೀಸ್ ಸಿಬ್ಬಂದಿ ನಾಗೇಶ್ ಮೇಲೆ ಆರೋಪಿ ಹಲ್ಲೆಗೆ ಯತ್ನಿಸಿದ್ದ. ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದ.

ಈ ವೇಳೆ ಸಬ್ ಇನ್‌ಸ್ಪೆಕ್ಟರ್‌ ಅಯ್ಯಪ್ಪ ಫೈರಿಂಗ್ ಮಾಡಿದ್ದಾರೆ. ಆರೋಪಿ ಕಾಲಿಗೆ ಗುಂಡಿಳಿಸಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ರಾಧಾಕೃಷ್ಣ ನೀರು ಸರಬರಾಜು ಯೋಜನೆ ವಿರೋಧಿಸಿ ಪ್ರತಿಭಟನೆ

Spread the loveಚಿಕ್ಕೋಡಿ ತಾಲೂಕಿನ ಕಲ್ಲೋಳಿ ಗ್ರಾಮದ ಸಮೀಪ ರಾಧಾಕೃಷ್ಣ ನೀರು ಸರಬರಾಜು ಯೋಜನೆಯನ್ನು ಸ್ಥಾಪಿಸಲು ಮಹಾರಾಷ್ಟ್ರ ಸರ್ಕಾರವು ಸದ್ದಿಲ್ಲದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ