ಹಾಸನ: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ನ ಬರ್ಬರವಾಗಿ ಹತ್ಯೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.
ಹಾಸನ ನಗರದ ಚನ್ನಪಟ್ಟಣದಲ್ಲಿರುವ ಜಿಲ್ಲಾ ಕೋರ್ಟ್ ಮುಂಭಾಗ ಇಂದು ಮುಂಜಾನೆ ಘಟನೆ ನಡೆದಿದೆ. ಮಂಜೇಶ್ (43) ಕೊಲೆಯಾದ ರೌಡಿಶೀಟರ್.
ಮಂಜೇಶ್ ತಾಯಿ ಹಾಸನ ಮೂಲದವರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. ಬೆಂಗಳೂರಿನಲ್ಲಿ ರೌಡಿಶೀಟರ್ ಆಗಿರುವ ಮಂಜೇಶ್ ಹಾಸನಕ್ಕೆ ಬಂದಿದ್ದ ವೇಳೆ ಹಂತಕರು ಮಾರಕಾಸ್ತ್ರಗಳನ್ನ ಹಿಡಿದು ದಾಳಿ ನಡೆಸಿದ್ದು ಮುಖದ ಗುರುತು ಸಿಗದಂತೆ ಕೊಚ್ಚಿ ಕೊಲೆಗೈದು ಎಸ್ಕೇಪ್ ಆಗಿದ್ದಾರೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ
Laxmi News 24×7