ಹಾವೇರಿ : ಯಾಲಕ್ಕಿ ನಗರಿ ಹಾವೇರಿಯಲ್ಲಿ ಇದೇ ಫೆ.26ರಿಂದ 28ರವರೆಗೆ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ.
ಕೊರೊನಾ ಆತಂಕದ ನಡುವೆ ವಿವಿಧ ಸಿದ್ಧತೆಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡಿಕೊಳ್ಳುತ್ತಿದೆ. ಆದರೆ, ಸರ್ಕಾರದಿಂದ ಅನುದಾನ ಮಂಜೂರಾಗದಿರುವುದು, ಸಿದ್ಧತೆಗೆ ಸಮಯ ಕಡಿಮೆ ಇರುವುದರಿಂದಾಗಿ ನಿರ್ಧಾರಿತ ದಿನಾಂಕದಂದು ಸಾಹಿತ್ಯ ಸಮ್ಮೇಳನ ನಡೆಸುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ.
ರಾಜ್ಯ ಸರ್ಕಾರ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೇನು 20 ದಿನಗಳು ಉಳಿದೆ. ಇಲ್ಲಿಯವರೆಗೂ ಅನುದಾನ ನೀಡದೆ ಇರುವುದು ಕನ್ನಡ ಸಾಹಿತ್ಯ ಕಡೆಗೆ ನಿರ್ಲಕ್ಷ್ಯ ತೋರುತ್ತದೆ ಎನ್ನುವುದು ತಿಳಿಯುತ್ತದೆ ಎಂದು ಸಾಹಿತ್ಯಾಸಕ್ತರು ಬೇಸರ ವ್ಯಕ್ತ ಪಡಿಸಿದ್ದಾರೆ.
ಅನುದಾನ ಬಿಡುಗಡೆ ಮಾಡಿದ್ರೆ, ಅವಸರವಸರವಾಗಿ ಸಾಹಿತ್ಯ ಸಮ್ಮೇಳನ ನಡೆಸಲು ಅಸಾಧ್ಯವಾಗಿದೆ. ಕನಿಷ್ಠ 20-25 ದಿನ ಮುಂದೂಡುವಂತೆ ಸ್ವಾಗತ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.