Breaking News

ಕಾಮಾಗಾರಿ ವೇಳೆ ಮಣ್ಣು ಕುಸಿತ – ಚರಂಡಿಯಲ್ಲಿ ಸಿಲುಕಿದ ಕಾರ್ಮಿಕ……..

Spread the love

ಹುಬ್ಬಳ್ಳಿ: ಒಳಚರಂಡಿ ಕಾಮಾಗಾರಿ ಮಾಡುತ್ತಿದ್ದಾಗ ಮಣ್ಣು ಕುಸಿದ ಪರಿಣಾಮ ಮಣ್ಣಿನಡಿಯಲ್ಲಿ ಕಾರ್ಮಿಕನೋರ್ವ ಸಿಲುಕಿಕೊಂಡ ಘಟನೆ ಹುಬ್ಬಳ್ಳಿಯ ಬೈಲಪ್ಪನವರ ನಗರದ ನಡೆದಿದೆ.

ಕಾರ್ಮಿಕ ಯಲ್ಲಪ್ಪ ಮಣ್ಣಿನಲ್ಲಿ ಸಿಲುಕಿ ಜೀವನ್ಮರಣ ಹೋರಾಟ ನಡೆಸಿದ್ದಾರೆ. ಇಂದು ಬೆಳಗ್ಗೆ ಒಳಚರಂಡಿ ಒಳಗೆ ಇಳಿದು ಯಲ್ಲಪ್ಪ ಕೆಲಸ ಮಾಡುತ್ತಿದ್ದರು. ಈ ವೇಳೆ ಮೇಲಿಂದ ಮಣ್ಣು ಕುಸಿದು ಯಲ್ಲಪ್ಪ ಅವರ ಮೇಲೆ ಬಿದ್ದಿದೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಅವರ ರಕ್ಷಣೆಗೆ ಧಾವಿಸಿದರು. ಆದರೆ ಹೆಚ್ಚಿನ ಪ್ರಮಾಣದಲ್ಲಿ ಮಣ್ಣು ಕುಸಿದ ಪರಿಣಾಮ ಅವರನ್ನು ಮೇಲೆ ಎತ್ತಲು ಸ್ಥಳೀಯರಿಂದ ಸಾಧ್ಯವಾಗದಿದ್ದಾಗ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಯಲ್ಲಪ್ಪ ಅವರನ್ನು ರಕ್ಷಿಸಿ ಕಿಮ್ಸ್ ಗೆ ದಾಖಲಿಸಿದ್ದಾರೆ. ನಾಗೇಶ್ ಹಂಚಿನಮನಿ ಎಂಬಾತ ಈ ಕಾಮಗಾರಿ ಗುತ್ತಿಗೆ ಪಡೆದಿದ್ದ ಎನ್ನಲಾಗಿದ್ದು, ಆತ ಸ್ಥಳದಿಂದ ಪರಾರಿಯಾಗಿದ್ದಾನೆ. ಅಶೋಕ ನಗರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

About Laxminews 24x7

Check Also

ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ

Spread the love ನಾಗನೂರು ಪಟ್ಟಣದಲ್ಲಿ ವಿಭಾಗ ಹಾಗೂ ರಾಜ್ಯಮಟ್ಟದ ಖೋ ಖೋ ಟೂರ್ನಿಯಲ್ಲಿ ಸಂಸದೆ ಪ್ರಿಯಾಂಕ ಜಾರಕಿಹೊಳಿ ಭಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ