Breaking News

ಹುಬ್ಬಳ್ಳಿ: ಕಾರ್ಮಿಕರಿಗೆ ನೀಡುವ ಕಿಟ್ ಕಲಘಟಗಿ ಬಿಜೆಪಿ ಶಾಸಕರ ಕಚೇರಿಯಲ್ಲಿಯೇ ಉಳಿದುಕೊಂಡಿದೆ.

Spread the love

ಹುಬ್ಬಳ್ಳಿ: ಕಾರ್ಮಿಕರಿಗೆ ನೀಡುವ ಕಿಟ್ ಕಲಘಟಗಿ ಬಿಜೆಪಿ ಶಾಸಕರ ಕಚೇರಿಯಲ್ಲಿಯೇ ಉಳಿದುಕೊಂಡಿದೆ. ಅಲ್ಲದೆ ಕಾರ್ಮಿಕರಿಗೆ ಬಿಟ್ಟು ಶಾಸಕ ಸಿ.ಎಂ ನಿಂಬಣ್ಣವರ ಅವರು ಬಿಜೆಪಿ ಕಾರ್ಯಕರ್ತರಿಗೆ ಕಿಟ್ ಕೊಡುತ್ತಾರೆ ಎಂದು ಕಾಂಗ್ರೆಸ್ ಮುಖಂಡರು ದೂರು ಸಲ್ಲಿಸಿದ್ದಾರೆ.

ಧಾರವಾಡ ಜಿಲ್ಲೆಯ ಕಲಘಟಗಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸಿ.ಎಂ ನಿಂಬಣ್ಣವರಿಂದ ಕಿಟ್ ದುರ್ಬಳಕೆ ಆರೋಪ ಕೇಳಿ ಬಂದಿದೆ. ಕಾರ್ಮಿಕ ಇಲಾಖೆ ನೀಡುವ ಕಿಟ್‍ಗಳನ್ನ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಗಂಭೀರವಾಗಿ ಆರೋಪಿಸಿದ್ದಾರೆ.

ಲಾಕ್ ಡೌನ್‍ನಿಂದ ಸಂಕಷ್ಟದಲ್ಲಿರುವ ಕಟ್ಟಡ ಕಾರ್ಮಿಕರಿಗೆ ದಿನಬಳಕೆಯ ಕಿಟ್‍ಗಳನ್ನ ಸರ್ಕಾರ ನೀಡಿದ್ದು, ಆದರೆ ಶಾಸಕರು ಕಾರ್ಮಿಕರ ಕಿಟ್‍ಗಳನ್ನ ಬಿಜೆಪಿ ಕಾರ್ಯಕರ್ತರಿಗೆ ಹಂಚುತ್ತಿದ್ದಾರೆ. ಕಾರ್ಮಿಕ ಇಲಾಖೆಯಲ್ಲಿರಬೇಕಾದ ಕಿಟ್‍ಗಳನ್ನು ಶಾಸಕರ ಕಚೇರಿಯಲ್ಲಿ ಇಟ್ಟಿರುವುದು ಯಾಕೆ ಎಂಬುವುದು ಕಾಂಗ್ರೆಸ್ ಮುಖಂಡರ ಪ್ರಶ್ನೆಯಾಗಿದೆ.

ಕಾಂಗ್ರೆಸ್ ಮುಖಂಡರು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಹಾಗೂ ಹಿರಿಯ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.


Spread the love

About Laxminews 24x7

Check Also

ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

Spread the loveಹುಬ್ಬಳ್ಳಿ: ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಾಲ್ಕನೇ ಮಹಡಿಯಿಂದ ಬಿದ್ದು ಅನುಮಾನಸ್ಫದವಾದ ರೀತಿಯಲ್ಲಿ ಸಾವನ್ನಪ್ಪಿದ ಘಟನೆ ಭೈರಿದೇರಕೊಪ್ಪದಲ್ಲಿರುವ ಸನಾ ಕಾಲೇಜಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ