Breaking News

ಮಹಿಳೆ ಜೊತೆ ಅಸಭ್ಯ ವರ್ತನೆ ಆರೋಪ – ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿತ

Spread the love

ಬೆಂಗಳೂರು: ಮಹಿಳೆ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಹೆಡ್‌ ಕಾನ್ಸ್‌ಟೇಬಲ್‌ಗೆ ಹಿಗ್ಗಾಮುಗ್ಗ ಥಳಿಸಿದ ಘಟನೆ ಗಂಗಮ್ಮನ ಗುಡಿ ಸರ್ಕಲ್ ಬಳಿ ನಡೆದಿದೆ.

ಸಂಜಯ್ ನಗರ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಮಂಜುನಾಥ್ ಅವರ ಮೇಲೆ ಹಲ್ಲೆ ನಡೆದಿದೆ. ಜಾಲಹಳ್ಳಿಗೆ ತೆರಳಲು ಅವರು ಬಸ್‌ ಹತ್ತಿದ್ದರು. ಬಸ್‌ನಲ್ಲಿ ಮಹಿಳೆಯೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಾತಿಗೆ ಮಾತು ಬೆಳೆದು ದೊಡ್ಡ ಗಲಾಟೆಯಾಗಿದೆ.

ಮಹಿಳೆ ಸಂಬಂಧಿಕರಿಗೆ ಕರೆ ಮಾಡಿ, ಗಂಗಮ್ಮನ ಗುಡಿ ಸರ್ಕಲ್ ಬಳಿಗೆ ಕರೆಸಿಕೊಂಡಿದ್ದಳು. ಬಸ್‌ ಅಲ್ಲಿಗೆ ಬರುತ್ತಿದ್ದಂತೆ ಯುವಕರ ಗುಂಪು ಹಲ್ಲೆ ನಡೆಸಿದೆ. ನಾನು ಪೊಲೀಸ್ ಪೊಲೀಸ್ ಎಂದರೂ ಬಿಡದೆ ಬಟ್ಟೆ ಹರಿದು ಹಲ್ಲೆ ಮಾಡಿದ್ದಾರೆ. ಹಲ್ಲೆಯಿಂದ ಮುಖ ಹಾಗೂ ಮೈಮೇಲೆ ಗಾಯಗಳಾಗಿದ್ದು, ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಮಹಿಳೆ ಹಾಗೂ ಪೊಲೀಸ್‌ ಪೇದೆಯಿ ಇಬ್ಬರೂ ದೂರು – ಪ್ರತಿದೂರು ದಾಖಲಿಸಿದ್ದಾರೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ