Breaking News

ಹಾಸನದಲ್ಲಿ ಮಳೆಯಬ್ಬರ – ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಳ

Spread the love

ಹಾಸನ: ಜಿಲ್ಲೆಯಲ್ಲಿ ವರಣನ ಅಬ್ಬರ ಮುಂದುವರಿದಿದ್ದು, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗಗಳಲ್ಲಿ ಬಾರಿ ಗಾಳಿಯೊಂದಿಗೆ ನಿರಂತರವಾಗಿ ಮಳೆಯಾಗುತ್ತಿದೆ. ಇತ್ತ ಪಕ್ಕದ ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ಭಾಗದಲ್ಲೂ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಬಾರಿ ಏರಿಕೆಯಾಗಿದೆ.

ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593 ಕ್ಯೂಸೆಕ್ ಒಳಹರಿವಿದ್ದು, 300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ ಜಲಾಶಯದಲ್ಲಿ ಸದ್ಯ 18.782 ಟಿಎಂಸಿ ನೀರು ಸಂಗ್ರಹವಾಗಿದೆ. ಜಲಾಶಯದ ಗರಿಷ್ಠ ನೀರಿನ ಮಟ್ಟ 2922.00 ಅಡಿಗಳಾಗಿದ್ದು, ಸದ್ಯ 2898.40 ಅಡಿಗಳಷ್ಟಿರುವ ನೀರಿದೆ. ಕಾವೇರಿಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಹೇಮಾವತಿ ಜಲಾಶಯವೂ ಒಂದಾಗಿದೆ.

ಬೇಲೂರು ತಾಲೂಕಿನ ಶಾಲೆಗಳಿಗೆ ರಜೆ:
ಹಾಸನ ಜಿಲ್ಲೆಯ, ಬೇಲೂರು, ತಾಲೂಕಿನಲ್ಲಿ ಬಿರುಗಾಳಿ ಸಹಿತ ಬಾರಿ ಮಳೆಯಾಗುತ್ತಿದ್ದು, ಮುಂಜಾಗ್ರತೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೇಲೂರು ತಾಲೂಕಿನ, ಅರೇಹಳ್ಳಿ, ಬಿಕ್ಕೋಡು, ಚೀಕನಹಳ್ಳಿ ಹೋಬಳಿಗಳು, ಕಸಬಾ ಎ, ಕಸಬಾ ಬಿ ವಲಯದ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಹಾಗೂ ಪ್ರೌಢಶಾಲೆಗಳಿಗೆ ಇಂದು ರಜೆ ಘೋಷಿಸಿ ಬೇಲೂರು ತಹಶೀಲ್ದಾರ್ ಶ್ರೀಧರ್ ಕಂಕನವಾಡಿ ಆದೇಶಿದ್ದಾರೆ. ಈ ಭಾಗಗಳಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ. ಮಂಗಳವಾರ, ಇಂದು ರಜೆ ನೀಡಿದ್ದರಿಂದ ಶನಿವಾರ ಪೂರ್ತಿ ದಿನ ಶಾಲೆ ನಡೆಸುವಂತೆ ತಹಶೀಲ್ದಾರ್ ಆದೇಶಿಸಿದ್ದಾರೆ.


Spread the love

About Laxminews 24x7

Check Also

ಸಿ.ಟಿ. ರವಿ ಮೊದಲು ವಾಯ್ಸ್ ಸ್ಯಾಂಪಲ್ ಕೊಟ್ಟು ಆಮೇಲೆ ಮಾತನಾಡಲಿ: ಪ್ರಿಯಾಂಕ್ ತಿರುಗೇಟು

Spread the loveಬೆಂಗಳೂರು: ಸಿ.ಟಿ. ರವಿ ಅವರು ಮೊದಲು ತಮ್ಮ ವಾಯ್ಸ್ ಸ್ಯಾಂಪಲ್ ನೀಡಿ, ಆ ಬಳಿಕ ಬೇರೆಯವರ ಬಗ್ಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ