Breaking News

ಕೊಡಗಿನಲ್ಲಿ ಮಳೆಯ ಅಬ್ಬರ – ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ

Spread the love

ಮಡಿಕೇರಿ: ಕೊಡಗು  ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಮಳೆ (Rain) ಗಳು ತುಂಬಿ ಹರಿಯುತ್ತಿವೆ.

ತಲಕಾವೇರಿ ಭಾಗಮಂಡಲ ವ್ಯಾಪ್ತಿಯಲ್ಲೂ ಉತ್ತಮ ಮಳೆಯಾಗುತ್ತಿದೆ. ಇದರಿಂದಾಗಿ ಕಾವೇರಿ ನದಿ ನೀರಿನ ಮಟ್ಟ ಏರಿಕೆಯಾಗಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ  ನೀರಿನ ಮಟ್ಟದಲ್ಲಿ ಏರಿಕೆ ಕಂಡಿದೆ.

ಹಾರಂಗಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆಯಾಗುತ್ತಿದೆ. ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದಿನ ನೀರಿನ ಮಟ್ಟ 2,857.88 ಅಡಿಗಳಿಗೆ ತಲುಪಿದೆ. ಜಲಾಶಯಕ್ಕೆ 4,008 ಕ್ಯೂಸೆಕ್ ನೀರು ಒಳಹರಿವು ಬರುತ್ತಿದೆ. 3,700 ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹೊರಬಿಡಲಾಗುತ್ತಿದೆ. ಮತ್ತೆ ಮಳೆ ಚುರುಕಾದ ಹಿನ್ನಲೆ ಕೊಡಗಿನ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

ಜಿಲ್ಲೆಯಲ್ಲಿ ಇನ್ನಷ್ಟು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನಲ್ಲಿ ಆ. 1ರಂದು 16ನೇ ಪದವಿ ಪ್ರದಾನ ಸಮಾರಂಭ

Spread the loveಬಾಗಲಕೋಟೆ: ನಗರದ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜಿನ 2024–25ನೇ ಸಾಲಿನ ವಿದ್ಯಾರ್ಥಿಗಳಿಗಾಗಿ ೧೬ನೇ ಪದವಿ ಪ್ರದಾನ ಸಮಾರಂಭವನ್ನು ಆಗಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ