Breaking News
Home / new delhi / ಸ್ಮಶಾನಕ್ಕೆ ತೆರಳಲು ದಾರಿ ನೀಡಲು ಆಗ್ರಹ

ಸ್ಮಶಾನಕ್ಕೆ ತೆರಳಲು ದಾರಿ ನೀಡಲು ಆಗ್ರಹ

Spread the love

ಹುಬ್ಬಳ್ಳಿ :ಶವ ಸಂಸ್ಕಾರಕ್ಕಾಗಿ ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದೇ ತೊಂದರೆ ಅನುಭವಿಸುತ್ತಿರುವ ತಾಲೂಕಿನ ಸೊಟಕನಾಳ ಗ್ರಾಮಸ್ಥರು ಸೂಕ್ತ ದಾರಿ ಕಲ್ಪಿಸಬೇಕು ಎಂದು ಒತ್ತಾಯಿಸಿ ತಹಸೀಲ್ದಾರ್ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ಸೊಟಕನಾಳ ಗ್ರಾಮದ ಮುಖಂಡ ಚನ್ನಪ್ಪ ಹಾಲವಾರ ಮಾತನಾಡಿ, ಸೊಟಕನಾಳದಲ್ಲಿ 1997ರಲ್ಲಿ ಅಂದಿನ ತಹಸೀಲ್ದಾರ್​ರು ರಿಸನಂ 2ರಲ್ಲಿ 20 ಗುಂಟೆ ಜಾಗವನ್ನು ಸ್ಮಶಾನಕ್ಕೆ ನೀಡಿದ್ದರು. ಆದರೆ, ಸ್ಮಶಾನಕ್ಕೆ ತೆರಳಲು ಜಾಗ ಇಲ್ಲದ್ದರಿಂದ ಗ್ರಾಮಸ್ಥರು ತೊಂದರೆ ಅನುಭವಿಸುತ್ತ ಬಂದಿದ್ದಾರೆ.

 

ಕಳೆದ 23 ವರ್ಷಗಳಿಂದ ಗ್ರಾಮಸ್ಥರು ಸ್ಮಶಾನಕ್ಕಾಗಿ ದಾರಿ ಕಲ್ಪಿಸುವಂತೆ ಆಗ್ರಹಿಸಿ ಸಂಬಂಧಿಸಿದ ಮೇಲಧಿಕಾರಿಗಳಿಗೆ ಮೌಖಿಕ ಮತ್ತು ಲಿಖಿತವಾಗಿ ಮನವಿಯನ್ನೂ ಸಲ್ಲಿಸಿ ರೋಸಿ ಹೋಗಿದ್ದಾರೆ.

ಈ ಕುರಿತಂತೆ ಜನಪ್ರತಿನಿಧಿಗಳ ಗಮನಕ್ಕೂ ತಂದರೂ ಈವರೆಗೆ ಯಾವುದೆ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.


Spread the love

About Laxminews 24x7

Check Also

ಲೋಕಸಭಾ ಚುನಾವಣೆ: ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

Spread the loveಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಮುಗಿಯಲು ಕೆಲವೇ ಹೊತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ