Breaking News

ಕ್ವಾರಂಟೈನ್ ನಲ್ಲಿರುವರ ಬೇಡಿಕೆ ಕೇಳಿ ಬಿಬಿಎಂಪಿ ಸಿಬ್ಬಂದಿ ರೋಸಿ ಹೋಗಿದ್ದಾರೆ..

Spread the love

ಬೆಂಗಳೂರು: ಕ್ವಾರಂಟೈನ್ ನಲ್ಲಿರುವ ಹೊಂಗಸಂದ್ರದ ಬಿಹಾರಿಗಳು ಸಿಕ್ಕಾಪಟ್ಟೆ ಬೇಡಿಕೆ ಇಡುತ್ತಿದ್ದು, ಇವರ ಬೇಡಿಕೆ ಕೇಳಿ ಬಿಬಿಎಂಪಿ ಸಿಬ್ಬಂದಿ ರೋಸಿ ಹೋಗಿದ್ದಾರೆ.

ಹೊಂಗಸಂದ್ರ- ಎಲೆಕ್ಟ್ರಾನಿಕ್ ಸಿಟಿ ಮಧ್ಯ ಭಾಗದಲ್ಲಿ ಬರುವ ಮಣಿಪಾಲ್ ಕೌಂಟಿ ಹೋಟೆಲ್ ನಲ್ಲಿ ಬಿಹಾರಿ ಮೂಲದ ವ್ಯಕ್ತಿಗಳನ್ನು ಕ್ವಾರಂಟೈನ್ ಮಾಡಲಾಗಿದೆ. ಈಗ ಟಿವಿ ಹಾಕಿಸಿ ಊಟ ಬೇರೆ ಕೊಡಿ ಎಂದು ಬಿಹಾರಿಗಳು ದಿನಕ್ಕೊಂದು ಬೇಡಿಕೆ ಇಟ್ಟಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

ಈ ಬೇಡಿಕೆಗೆ ರೋಸಿ ಹೋದ ಬಿಬಿಎಂಪಿ ಅಧಿಕಾರಿಗಳು ಸೋಮವಾರ ಕೌನ್ಸಿಲಿಂಗ್ ಮಾಡಿಸಿದ್ದರು. ಈಗ ಹೆಚ್ಚುವರಿ ಪೊಲೀಸ್ ಭದ್ರತೆಯ ಬಗ್ಗೆಯೂ ಚಿಂತನೆ ನಡೆಸಿದ್ದಾರೆ.

ಬಿಹಾರಿ ಕಾರ್ಮಿಕನಿಂದ 29 ಮಂದಿಗೆ ಸೋಂಕು ಹರಡಿದ್ದು, ಸೋಂಕಿತರ ಜೊತೆ ಸಂಪರ್ಕ ಹೊಂದಿರುವ 212 ಮಂದಿಯನ್ನು ಕ್ವಾರಂಟೈನ್ ಮಾಡಿ, ಮೂರು ಹೊತ್ತು ಊಟ, ಕುಡಿಯಲು ನೀರಿನ ಬಾಟಲ್ ಸೇರಿದಂತೆ ಬಿಬಿಎಂಪಿ ಎಲ್ಲ ವ್ಯವಸ್ಥೆ ಮಾಡಿದೆ.

ಹೊಂಗಸಂದ್ರದಲ್ಲಿ ಕಳೆದ ಎರಡು ದಿನಗಳಿಂದ ಯಾವುದೇ ಹೊಸ ಪ್ರಕರಣಗಳು ದಾಖಲಾಗಿಲ್ಲ. ಕ್ವಾರಂಟೈನ್ ಮಾಡಲಾದ 212 ಮಂದಿಯಲ್ಲಿ ಪ್ರಾಥಮಿಕ 175 ಹಾಗೂ 63 ಜನರನ್ನು ದ್ವಿತೀಯ ಸಂಪರ್ಕಿತರು ಎಂದು ಗುರುತಿಸಿಲಾಗಿದ್ದು, ಯಾರಿಗೂ ಸೋಂಕಿನ ಲಕ್ಷಣ ಕಾಣಿಸಿಕೊಂಡಿಲ್ಲ.


Spread the love

About Laxminews 24x7

Check Also

ಪ್ರತಿ ಟನ್ ಕಬ್ಬಿಗೆ​​ ಹೆಚ್ಚುವರಿ 50 ರೂ. ಕೊಡಲು ಸಾಧ್ಯವಿಲ್ಲ: ಸಕ್ಕರೆ ಮಿಲ್ಸ್ ಸಂಘಟನೆ ಅಧ್ಯಕ್ಷ

Spread the loveಬೆಂಗಳೂರು: ಪ್ರತಿ ಟನ್ ಕಬ್ಬಿಗೆ 3,200 ರೂ.‌ ಕೊಡಲು ಮಾತ್ರ ಸಾಧ್ಯ. 3,250 ರೂ. ಕೊಡುವುದು ಸಾಧ್ಯವಿಲ್ಲ ಎಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ