Breaking News

ಹೋಮ್ ಕ್ವಾರಂಟೈನ್ ಆದ ಹುಬ್ಬಳ್ಳಿಯ ಅಯೋಧ್ಯಾ ಹೋಟೆಲ್

Spread the love

ಧಾರವಾಡ/ಹುಬ್ಬಳ್ಳಿ: ಕೊರೊನಾ ವೈರಸ್ ನಿಯಂತ್ರಿಸುವ ಸದುದ್ದೇಶದಿಂದ ಹಾಗೂ ಜಿಲ್ಲೆಯಲ್ಲಿ ಕ್ವಾರಂಟೈನ್ ವ್ಯವಸ್ಥೆ ಹೆಚ್ಚು ಮಾಡುವ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾಡಳಿತ ಹುಬ್ಬಳ್ಳಿಯ ಅಯೋಧ್ಯಾ ಹೋಟೆಲ್‍ನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದೆ.

ದೆಹಲಿಯ ನಿಜಾಮುದ್ದೀನ್ ತಬ್ಲಿಘ್ ಜಮಾತ್ ಪ್ರಾರ್ಥನಾ ಮಂದಿರದಲ್ಲಿ ಸಭೆ ನಡೆಸಿ ಮರಳಿ ಬಂದ 30 ಜನರು ಸೇರಿ ಒಟ್ಟು 50 ಜನರನ್ನು ಹೋಟೆಲ್ ಗೆ ಶಿಫ್ಟ್ ಮಾಡಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಅಯೋಧ್ಯೆ ಹೊಟೇಲ್ ವಶಕ್ಕೆ ತೆಗೆದುಕೊಂಡಿದೆ.

ಈಗಾಗಲೇ ಅಯೋಧ್ಯೆ ಹೋಟೆಲ್ ಗೆ ಆರೋಗ್ಯ ಇಲಾಖೆ ಸಿಬ್ಬಂದಿ, ತಹಶೀಲ್ದಾರ್ ಶಶಿಧರ್ ಮಾಡ್ಯಾಳ್ ನೇತೃತ್ವದಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೋಮ್ ಕ್ವಾರಂಟೈನ ನಲ್ಲಿದ್ದವರನ್ನು ಒಬ್ಬೊಬರನ್ನು ನಿಗಾವಹಿಸಲು ಕಷ್ಟವಾಗುತ್ತಿದ್ದು, ಒಂದೆಡೆಯಲ್ಲಿ ಹೋಮ್ ಕ್ವಾರಂಟೈನ ನಲ್ಲಿದ್ದವರನ್ನು ಹೋಟೆಲ್ ಅಯೋಧ್ಯಾಗೆ ಶಿಫ್ಟ್ ಮಾಡಲು ಜಿಲ್ಲಾಡಳಿತ ಮುಂದಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ