Breaking News

ಹುಬ್ಬಳ್ಳಿ:ಹೋಂ ಕ್ವಾರಂಟೈನ್‍ಗೆ ರಾಜ್ಯದ ಐವರು ಮಾಧ್ಯಮ ಪ್ರತಿನಿಧಿಗಳು

Spread the love

ಹುಬ್ಬಳ್ಳಿ: ಐವರು ಮಾಧ್ಯಮ ಪ್ರತಿನಿಧಿಗಳು ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹುಬ್ಬಳ್ಳಿಯಲ್ಲಿ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ.

ನಗರದ ವಿವಿಧ ಮಾಧ್ಯಮ ಸಂಸ್ಥೆಗಳಿಗೆ ಸೇರಿದ ಐವರು ಮಾಧ್ಯಮ ಪ್ರತಿನಿಧಿಗಳು ತಮ್ಮಲ್ಲಿ ಕೊರೊನಾದ ಯಾವುದೇ ಲಕ್ಷಣಗಳಿಲ್ಲದಿದ್ದರೂ ಮುಂಜಾಗ್ರತಾ ಕ್ರಮವಾಗಿ ಸ್ವಯಂ ಪ್ರೇರಣೆಯಿಂದ ಹೋಂ ಕ್ವಾರಂಟೈನ್‍ಗೆ ಒಳಗಾಗಿದ್ದಾರೆ. ಇವರು ಏಪ್ರಿಲ್ 9ರಂದು ಶಬ್ ಎ ಬರಾತ್ ಆಚರಣೆಯ ಕುರಿತು ವರದಿಗಾರಿಕೆಗಾಗಿ ಹುಬ್ಬಳ್ಳಿಯ ತೊರವಿಹಕ್ಕಲದ ಖಬರಸ್ತಾನಕ್ಕೆ ತೆರಳಿದ್ದರು.

ಈ ಸ್ಮಶಾನದ ಕಾವಲುಗಾರನಿಗೆ (ಪಿ- 363) ಕೊರೊನಾ ಸೋಂಕು ಇರುವುದು ಏಪ್ರಿಲ್ 18 ರಂದು ದೃಢಪಟ್ಟತ್ತು. ಈ ಹಿನ್ನೆಲೆಯಲ್ಲಿ ಈ ಎಲ್ಲ ಐವರು ಪ್ರತಿನಿಧಿಗಳನ್ನು ದ್ವಿತೀಯ ಹಂತದ ಸಂಪರ್ಕಿತರು ಎಂದು ಪರಿಗಣಿಸಲಾಗಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಹೋಂ ಕ್ವಾರಂಟೈನ್‍ಗೆ ಒಳಪಟ್ಟಿದ್ದಾರೆ. ಈ ಐದೂ ಜನ ಮಾಧ್ಯಮ ಪ್ರತಿನಿಧಿಗಳ ಆರೋಗ್ಯ ಸ್ಥಿರವಾಗಿದೆ.


Spread the love

About Laxminews 24x7

Check Also

ಬಿಯರ್‌ ಕ್ಯಾನ್‌ನಲ್ಲಿ ಮಹಾತ್ಮ ಗಾಂಧೀಜಿ ಫೋಟೋ ಮುದ್ರಿಸಿದ ಮದ್ಯ ಕಂಪನಿ

Spread the loveದೇಶವನ್ನು ಬ್ರಿಟೀಷರ ದಾಸ್ಯದಿಂದ ಮುಕ್ತಗೊಳಿಸುವುದರ ಜೊತೆಗೆ ಮದ್ಯ ಮುಕ್ತ ಸಮಾಜದ ಕನಸು ಕಂಡಿದ್ದವರು ಗಾಂಧೀಜಿ. ಆದ್ರೆ ಇಲ್ಲೊಂದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ