Breaking News
Home / ಜಿಲ್ಲೆ / ಹಾಸನ / ಕೊರೊನಾದಿಂದ ಕಲ್ಯಾಣ ಮಂಟಪ ಮಾಲೀಕರಿಗೆ 50 ಕೋಟಿ ನಷ್ಟ

ಕೊರೊನಾದಿಂದ ಕಲ್ಯಾಣ ಮಂಟಪ ಮಾಲೀಕರಿಗೆ 50 ಕೋಟಿ ನಷ್ಟ

Spread the love

ಹಾಸನ: ಕೊರೊನಾ ವೈರಸ್ ಜಿಲ್ಲೆಯ ಕಲ್ಯಾಣ ಮಂಟಪದ ಮಾಲೀಕರನ್ನು ಅತಂತ್ರ ಸ್ಥಿತಿಗೆ ದೂಡಿದೆ. ಹಾಸನ ನಗರದಲ್ಲೇ ಕಲ್ಯಾಣ ಮಂಟಪ ಮಾಲೀಕರಿಗೆ ಬರೋಬ್ಬರಿ 50 ರಿಂದ 60 ಕೋಟಿ ನಷ್ಟ ಆಗಿದೆ ಎಂದು ಹಾಸನ ಕಲ್ಯಾಣ ಮಂಟಪದ ಅಧ್ಯಕ್ಷ ದಿನೇಶ್ ಹೇಳಿಕೆ ನೀಡಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ದಿನೇಶ್ ಅವರು, ಕಲ್ಯಾಣ ಮಂಟಪ ಮಾಲೀಕರು ಈಗಾಗಲೇ ಮದುವೆಗೆ ಬುಕ್ ಮಾಡಿದವರ ಹಣ ವಾಪಸ್ ಕೊಡಲು ಅಸಾಹಯಕತೆ ತೋಡಿಕೊಂಡಿದ್ದಾರೆ. ಈ ಕುರಿತು ಹಾಸನ ಡಿಸಿ ಸಮ್ಮುಖದಲ್ಲಿ ಸಭೆ ನಡೆದಿದೆ. 40 ಸಾವಿರ ಹಣ ಕಟ್ಟಿದವರ ಹಣದಲ್ಲಿ 20% ಕಡಿತ ಹಾಗೂ 40 ಸಾವಿರ ಮೇಲೆ ಹಣ ಕಟ್ಟಿದವರಿಗೆ 30% ಹಣ ಕಡಿತ ಮಾಡಿ ವಾಪಸ್ ನೀಡಲು ಜಿಲ್ಲಾಧಿಕಾರಿ ಒಪ್ಪಿಗೆ ಸೂಚಿಸಿದ್ದಾರೆ ಎಂದು ದಿನೇಶ್ ತಿಳಿಸಿದ್ದಾರೆ.

ಸದ್ಯ ಕೊರೊನಾ ಅಟ್ಟಹಾಸ ಕಲ್ಯಾಣ ಮಂಟಪ ಮಾಲೀಕರನ್ನು ಪಾತಾಳಕ್ಕೆ ದೂಡಿದೆ. ಆದರೆ ಇತ್ತ ಕಲ್ಯಾಣ ಮಂಟಪಕ್ಕೆ ಅಡ್ವಾನ್ಸ್ ಹಣ ಕಟ್ಟಿರುವವರು ನಾವೂ ಕೂಡ ಕೊರೊನಾದಿಂದ ಸಂಕಷ್ಟಕ್ಕೆ ಸಿಲುಕಿದ್ದು, ನಮ್ಮ ಸಂಪೂರ್ಣ ಹಣ ವಾಪಸ್ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಹಾಸನದಲ್ಲಿ ಸುಮಾರು 50ಕ್ಕೂ ಅಧಿಕ ಕಲ್ಯಾಣ ಮಂಟಪ ಇದೆ. ಇದರಿಂದ ಸುಮಾರು 50 ರಿಂದ 60 ಕೋಟಿಯಷ್ಟು ನಷ್ಟವಾಗಿದೆ ಎಂದು ದಿನೇಶ್ ಹೇಳಿದರು.


Spread the love

About Laxminews 24x7

Check Also

ಅಜಾನ್ ವಿರುದ್ಧ ಜೂನ್ 1ರಿಂದ ಮತ್ತೆ ಹೋರಾಟ: ಮುತಾಲಿಕ್

Spread the love ಹಾಸನ, ಮೇ 22: “ಅಜಾನ್ ವಿಷಯದಲ್ಲಿ ಸರ್ಕಾರ ದೃಢ ನಿಲುವಿನೊಂದಿಗೆ ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ರಾಜ್ಯಾದ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ