Breaking News

ವಿದ್ಯಾರ್ಥಿಗಳಿಂದ ‘ಒಂದು ಮುಷ್ಠಿ ಅಕ್ಕಿ’ ಅಭಿಯಾನ.

Spread the love

ಹುಬ್ಬಳ್ಳಿ: ‘ಬಡ, ನಿರ್ಗತಿಕ ಹಾಗೂ ದಾಸೋಹ ಕೈಂಕರ್ಯ ನಡೆಸುತ್ತಿರುವ ಮಠಗಳಿಗೆ ವಿತರಿಸುವುದಕ್ಕಾಗಿ, ನಗರದ ಜಗದ್ಗುರು ಗಂಗಾಧರ ವಾಣಿಜ್ಯ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ(ಎನ್‌ಎಸ್‌ಎಸ್‌) ವಿದ್ಯಾರ್ಥಿಗಳು ‘ಒಂದು ಮುಷ್ಠಿ ಅಕ್ಕಿ’ ಅಭಿಯಾನ ಆರಂಭಿಸಿದ್ದಾರೆ’ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಡಿ.ವಿ. ಹೊನಗಣ್ಣವರ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸುಮಾರು 50 ವಿದ್ಯಾರ್ಥಿಗಳು ಜ. 1ರಿಂದ 20ರವರೆಗೆ ಹಮ್ಮಿಕೊಂಡಿರುವ ಅಭಿಯಾನಕ್ಕೆ ಉತ್ತಮ ಸ್ಪಂದನೆ ಸಿಕ್ಕಿದೆ. ಇದುವರೆಗೆ 25 ಕೆ.ಜಿ.ಯ 200ಕ್ಕೂ ಹೆಚ್ಚು ಅಕ್ಕಿ ಚೀಲಗಳು ಸಂಗ್ರಹವಾಗಿವೆ. ಇನ್ನೂ 100ಕ್ಕೂ ಹೆಚ್ಚು ಅಕ್ಕಿ ಚೀಲಗಳು ಸಂಗ್ರಹವಾಗುವ ನಿರೀಕ್ಷೆ ಇದೆ. ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಹಳೇ ವಿದ್ಯಾರ್ಥಿಗಳು ಅಭಿಯಾನಕ್ಕೆ ಸ್ಪಂದಿಸಿ ಅಕ್ಕಿ ಚೀಲಗಳನ್ನು ಕಳಿಸುತ್ತಿದ್ದಾರೆ. ಆರಂಭದಲ್ಲಿ ಒಂದು ಮುಷ್ಠಿ ಅಕ್ಕಿಯೊಂದಿಗೆ ಆರಂಭಗೊಂಡ ಅಭಿಯಾನವು ಇದೀಗ, 25 ಕೆ.ಜಿ ಚೀಲದ ಅಕ್ಕಿ ಸಂಗ್ರಹದ ಹಂತಕ್ಕೆ ಬಂದಿದೆ’ ಎಂದರು.

 

ಎನ್‌ಎಸ್‌ಎಸ್‌ ಅಧಿಕಾರಿ ಪ್ರೊ.ವಿ.ಎಸ್. ಕಟ್ಟೀಮಠ ಮಾತನಾಡಿ, ‘ಸಂಗ್ರಹಗೊಂಡಿರುವ ಅಕ್ಕಿ ಪೈಕಿ 101 ಚೀಲಗಳನ್ನು ಸಿದ್ಧಾರೂಢ ಮಠಕ್ಕೆ ನೀಡಲಾಗುವುದು. ಉಳಿದ ಅಕ್ಕಿಯನ್ನು ಮೂರುಸಾವಿರ ಮಠ, ಧಾರವಾಡದ ಮುರುಘಾಮಠ, ಕುಂದಗೋಳದ ಬಸವಣ್ಣಜ್ಜನವರ ದಾಸೋಹ ಮಠ, ಹುಬ್ಬಳ್ಳಿಯ ಹಳೇ ಕೋರ್ಟ್ ವೃತ್ತದಲ್ಲಿರುವ ಸಾಯಿ ಮಂದಿರ, ಅನಾಥಾಶ್ರಮ, ಅಂಧ-ಕಿವುಡ ಮಕ್ಕಳ ಸಂಸ್ಥೆ, ರಸ್ತೆ ಬದಿ ವಾಸಿಸುವ ನಿರಾಶ್ರಿತರು ಹಾಗೂ ಬಡವರಿಗೆ ವಿತರಿಸಲು ತೀರ್ಮಾನಿಸಲಾಗಿದೆ’ ಎಂದು ಹೇಳಿದರು.

 

ಅಭಿಯಾನದ ವಿದ್ಯಾರ್ಥಿಗಳಾದ ಮೀನಾಕ್ಷಿ ಹೊಂಡಲಕಟ್ಟಿ, ನವೀನ ಹೂಗಾರ, ಆದರ್ಶಗೌಡ ಎಂ., ಹೃಷಿಕೇಶ ಮಾನ್ವಿ, ಸುದೀಪ ಕುಂದರಗಿ, ಪುಜಾ ಸತೀಶ, ರಾಜು ಪವಾರ, ಮಲ್ಲಿಕಾರ್ಜುನ ಸಣ್ಣಗೌಡರ, ಸಚಿನ ಸುಬ್ಬಣ್ಣವರ, ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಪ್ರೊ. ಮ್ಯಾಗ್ಲಿನ್ ಕ್ರೂಸ್, ಪ್ರೊ.ಎಸ್‌.ಎ. ಗಣಿ ಇದ್ದರು.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಯೋಜನೆಗಳ ಅವಲೋಕನ

Spread the love ಸುಬ್ರಹ್ಮಣ್ಯ, ದಕ್ಷಿಣ ಕನ್ನಡ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ