Breaking News
Home / ಜಿಲ್ಲೆ / ಹುಬ್ಬಳ್ಳಿ:ಜಗದೀಶ್ ಶೆಟ್ಟರ್ ಪುತ್ರನಿಂದ ಆಹಾರ ಕಿಟ್ ವಿತರಣೆ……

ಹುಬ್ಬಳ್ಳಿ:ಜಗದೀಶ್ ಶೆಟ್ಟರ್ ಪುತ್ರನಿಂದ ಆಹಾರ ಕಿಟ್ ವಿತರಣೆ……

Spread the love

ಹುಬ್ಬಳ್ಳಿ: ಕೊರೊನಾ ವೈರಸ್ ಲಾಕ್‍ಡೌನ್ ನಡುವೆ ಸಚಿವ ಜಗದೀಶ್ ಶೆಟ್ಟರ್ ಅವರ ಮಗ ಸರ್ಕಾರದ ಆಹಾರ ಕಿಟ್ ವಿತರಣೆ ಮಾಡಿರುವುದು ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿದೆ.

ಹೌದು, ಯಾವುದೇ ಚುನಾಯಿತ ಪ್ರತಿನಿಧಿ ಅಲ್ಲದಿದ್ದರು ಕೂಡ ಜಗದೀಶ್ ಶೆಟ್ಟರ್ ಅವರ ಪುತ್ರ ಸಂಕಲ್ಪ ಶೆಟ್ಟರ್ ಕಾರ್ಮಿಕ ಇಲಾಖೆಯ ವತಿಯಿಂದ ವಿತರಿಸಲಾಗುತ್ತಿರುವ ಆಹಾರ ಕಿಟ್ ವಿತರಣೆ ಮಾಡಿ ಫೇಸ್‍ಬುಕ್ ಪೋಸ್ಟ್ ಹಾಕಿರುವುದು ಟೀಕೆಗೆ ಗುರಿಯಾಗಿದೆ. ಅಲ್ಲದೇ ಯಾವುದೇ ಚುನಾಯಿತ ವ್ಯಕ್ತಿ ಆಗಿಲ್ಲದಿದ್ದರು ಕೂಡ ತಂದೆಯ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎಂಬ ಆರೋಪ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿದೆ.

ಕಾರ್ಮಿಕ ಇಲಾಖೆಯ ಆಹಾರ ಕಿಟ್ ವಿತರಣೆ ಮಾಡಲು ಶೆಟ್ಟರ್ ಅವರ ಪುತ್ರ ಸಂಕಲ್ಪ ಶೆಟ್ಟರ್ ಗೆ ಅವಕಾಶ ಕೊಟ್ಟವರು ಯಾರು? ಸಚಿವರು ಮಾಡಬೇಕಾದ ಕಾರ್ಯವನ್ನು ಅವರ ಪುತ್ರ ಮಾಡಿದ್ಯಾಕೆ ಅನ್ನೋ ಅನುಮಾನ ಹುಟ್ಟುಹಾಕಿದೆ. ಜೊತೆಗೆ ಮುಂದಿನ ಚುನಾವಣೆಯಲ್ಲಿ ತಂದೆಯ ಬದಲಾಗಿ ಸಚಿವ ಜಗದೀಶ್ ಶೆಟ್ಟರ್ ಪುತ್ರ ಸ್ಪರ್ಧೆ ಮಾಡುವ ಉದ್ದೇಶದಿಂದ ಈಗಿನಿಂದಲೇ ಚುನಾವಣಾ ತಯಾರಿ ನಡೆಸುತ್ತಿದ್ದಾರೆ ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿವೆ.

ಒಟ್ಟಿನಲ್ಲಿ ಕಾರ್ಮಿಕ ಇಲಾಖೆಯ ಆಹಾರ ಕಿಟ್ ವಿತರಣೆ ಮಾಡುವ ಮೂಲಕ ತಂದೆಯ ಹೆಸರಿನಲ್ಲಿ ಮಗ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ. ಕೂಡಲೇ ಜಿಲ್ಲಾಡಳಿತ ಈ ಬಗ್ಗೆ ಕ್ರಮ ಜರುಗಿಸಬೇಕು ಎಂಬುವುದು ಸಾರ್ವಜನಿಕರ ಒತ್ತಾಯವಾಗಿದೆ.


Spread the love

About Laxminews 24x7

Check Also

ಐಸ್ ಕ್ರೀಂ ತಿಂದು ಅವಳಿ ಮಕ್ಕಳು ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಹೆತ್ತ ಕಂದಮ್ಮಗಳನ್ನೇ ವಿಷಪ್ರಾಶನ ಮಾಡಿಸಿ ಕೊಂದ ತಾಯಿ

Spread the love ಮಂಡ್ಯ: ಐಸ್ ಕ್ರೀಂ ಸೇವಿಸಿದ್ದ ಅವಳಿ ಮಕ್ಕಳಿಬ್ಬರೂ ಮೃತಪಟ್ಟಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಹೆತ್ತ ತಾಯಿಯೇ ವಿಷವುಣಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ