Breaking News

ಲಾಕ್‍ಡೌನ್‍ನಲ್ಲೂ ಹುಕ್ಕಾ ಬಾರ್ ಓಪನ್ ಮಾಡಿದ್ದ ಮೂವರು ಅಂದರ್

Spread the love

ಬೆಂಗಳೂರು, – ಲಾಕ್‍ಡೌನ್ ಸಂದರ್ಭದಲ್ಲೂ ಕಾನೂನು ಬಾಹಿರವಾಗಿ ನಡೆಸಲಾಗುತ್ತಿದ್ದ ಹುಕ್ಕಾ ಬಾರ್ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಹುಕ್ಕಾ ಬಾರ್ ಮಾಲೀಕ ಸೂರಜ್‍ಕುಮಾರ್ (29), ಮ್ಯಾನೇಜರ್ ಲಕ್ಷ್ಮಣ್ (26) ಹಾಗೂ ನೌಕರ ಜೀತು (21) ಬಂಧಿತ ಆರೋಪಿಗಳು

ಬನಶಂಕರಿ ಪೊಲೀಸ್ ಠಾಣೆ ವ್ಯಾಪ್ತಿಯ ಕ್ಯಾಫ್-11 ಹುಕ್ಕಾಬಾರ್‍ಅನ್ನು ಲಾಕ್‍ಡೌನ್ ಸಂದರ್ಭದಲ್ಲೂ ತೆರೆದು ಗ್ರಾಹಕರಿಗೆ ಅಕ್ರಮವಾಗಿ ಹುಕ್ಕಾ ನೀಡುತ್ತಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದ ಸಿಸಿಬಿ ಪೊಲೀಸರು ಹುಕ್ಕಾ ಬಾಟಲ್‍ಗಳು, ತಂಬಾಕು ಫ್ಲೇವರ್ ಬಾಕ್ಸ್‍ಗಳು ಹಾಗೂ ಎರಡು ಮದ್ಯದ ಬಾಟಲುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರ ವಿರುದ್ಧ ಕೋಟ್ಪಾ ಮತ್ತು ಅಬಕಾರಿ ಕಾಯ್ದೆಯಡಿ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ