Breaking News

ಪತ್ನಿ ಕೊಂದು ತಾನೂ ನೇಣಿಗೆ ಶರಣಾದ ಪತಿ‌

Spread the love

ಧಾರವಾಡ: ಪತ್ನಿಯನ್ನು ಕೊಂದು ಪತಿ ತಾನೂ ನೇಣಿಗೆ ಶರಣಾದ ಘಟನೆ ಧಾರವಾಡ  ತಾಲೂಕಿನ ಗರಗ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಮೌಲಾಸಾಬ್ (28) ಎಂಬಾತನೇ ತನ್ನ ಪತ್ನಿ ಸಲ್ಮಾ (21) ಎಂಬಾಕೆಯನ್ನು ಕೊಲೆ ಮಾಡಿ ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತನ್ನ ಒಂದೂವರೆ ವರ್ಷದ ಮಗುವಿನ ಎದುರೇ ಮೌಲಾಸಾಬ್ ಪತ್ನಿಯನ್ನು ಕೊಲೆ ಮಾಡಿ ತಾನೂ ನೇಣಿಗೆ ಶರಣಾಗಿದ್ದಾನೆ. ಕಳೆದ ಮೂರು ವರ್ಷಗಳ ಹಿಂದಷ್ಟೇ ಇವರ ವಿವಾಹವಾಗಿತ್ತು.

ಗುರುವಾರ ತಡರಾತ್ರಿ ಈ ಘಟನೆ ನಡೆದಿದೆ. ತಡರಾತ್ರಿವರೆಗೂ ಮನೆಯಲ್ಲಿ ಏನೂ ಶಬ್ದ ಬಾರದೇ ಇದ್ದಿದ್ದರಿಂದ ವೃದ್ಧೆಯೊಬ್ಬರು ಹೋಗಿ ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಕೊಲೆಯಾದ ಸಲ್ಮಾ ಮನೆಯವರು ಗರಗ ಗ್ರಾಮಕ್ಕೆ ಬರುತ್ತಿದ್ದಂತೆಯೇ ಎರಡೂ ಕುಟುಂಬಗಳ ಮಧ್ಯೆ ಗಲಾಟೆ ಸಂಭವಿಸಿದೆ. ಎರಡೂ ಕುಟುಂಬದವರು ಪರಸ್ಪರ ಹೊಡೆದಾಟಕ್ಕೆ ಮುಂದಾಗಿದ್ದಾರೆ.

ಅತ್ತೆ, ಮಾವನ ಕಾಟ ಸಲ್ಮಾಳಿಗೆ ಇತ್ತು. ಈ ಕಾಟಕ್ಕೆ ತನ್ನ ಮಗಳನ್ನೇ ಬಲಿ ಪಡೆದುಕೊಂಡಿದ್ದಾರೆ. ಅಳಿಯನ ಕಾಟ ಏನೂ ಇರಲಿಲ್ಲ. ಕೂಲಿ ಮಾಡುತ್ತಿದ್ದ ಆತನಿಗೆ ನಾವೇ ಸಹಾಯ ಮಾಡುತ್ತಿದ್ದೆವು. ನನ್ನ ಮಗಳು ಸಣ್ಣವಳು. ಆಕೆಯಲ್ಲಿ ಚುರುಕುತನ ಇರಲಿಲ್ಲ ಎಂದು ಸಲ್ಮಾ ತಾಯಿ ಆರೋಪಿಸಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಎಸ್‌ಪಿ ಗುಂಜನ್ ಆರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಧಾರವಾಡ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ


Spread the love

About Laxminews 24x7

Check Also

ಹನೂರು ಎನ್‌ಕೌಂಟರ್ ಪ್ರಕರಣ – ಸರ್ಕಾರಕ್ಕೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆ

Spread the loveಬೆಂಗಳೂರು: ಹನೂರಿನ ಕಾವೇರಿ ವನ್ಯಧಾಮದಲ್ಲಿ ನಡೆದ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾಗಿದೆ.‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ