ಹೈದರಾಬಾದ್: ಹುಡುಗಿ ಕೈಕೊಟ್ಟಿದ್ದಕ್ಕೆ ನೊಂದ 23 ವರ್ಷದ ಭಗ್ನ ಪ್ರೇಮಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಮಾರೆಡ್ಡಿ ಪಟ್ಟಣದ ಅಶೋಕ ನಗರದಲ್ಲಿ ನಡೆದಿದೆ.
ಸಂತೋಷ್ ಆತ್ಮಹತ್ಯೆಗೆ ಶರಣಾದ ಯುವಕ. ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಸಂತೋಷ್ ಯುವತಿಯನ್ನು ಪ್ರೀತಿಸುತ್ತಿದ್ದಳು. ಯುವತಿ ಇವನ ಪ್ರೀತಿಯನ್ನು ನಿರಾಕರಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದಾನೆ ಎಂದು ಸಂತೋಷ್ ಪೋಷಕರು ಹೇಳಿದ್ದಾರೆ.
ಆತ್ಮಹತ್ಯೆಗೆ ಮುನ್ನ ಟಿಕ್ಟಾಕ್ ವಿಡಿಯೋ ಮಾಡಿ ಸ್ಟೇಟಸ್ ಸಹ ಹಾಕಿಕೊಂಡಿದ್ದಾನೆ. ಸಂತೋಷ್ ತಿಮ್ಮಕ್ಕಪಾಳ್ಯದ ಮೂಲದವನಾಗಿದ್ದು, ಅಶೋಕ ನಗರದಲ್ಲಿ ತಾಯಿಯೊಂದಿಗೆ ವಾಸವಾಗಿದ್ದನು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.