ವಿಜಯಪುರ: ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕರ್ನಾಟಕಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ. ಈ ಹಿನ್ನೆಲೆ ವಿಜಯಪುರದ ಆಲಮಟ್ಟಿ ಜಲಾಶಯದಲ್ಲಿ ನೀರಿನ ಒಳಹರಿವು ಹೆಚ್ಚಳವಾಗಿದೆ.
ಮಹಾರಾಷ್ಟ್ರದಲ್ಲಿ ಮಳೆಯಾಗುವ ಮುನ್ನ ಆಲಮಟ್ಟಿಯ ಲಾಲಬಾಹ್ದೂರ ಶಾಸ್ತ್ರಿ ಜಲಾಶಯದಲ್ಲಿ ಕೇವಲ 2 ಟಿಎಂಸಿ ನೀರಿತ್ತು. ಇದೀಗ ಉತ್ತಮ ಮಳೆಯಾಗಿ ನೀರು ಹರಿದು ಬರುತ್ತಿದ್ದು, 123.081 ಟಿಎಂಸಿ ಗರಿಷ್ಠ ಮಟ್ಟದ ಜಲಾಶಯದಲ್ಲಿ 25.536 ಟಿಎಂಸಿ ನೀರಿದೆ.
ಸದ್ಯ ಜಲಾಶಯದಲ್ಲಿ 80,445 ಕ್ಯೂಸೆಕ್ ಒಳಹರಿವು ದಾಖಲಾಗಿದೆ. ನೀರು ಹರಿದು ಬರುತ್ತಿರುವ ಹಿನ್ನೆಲೆ ನೀರಿಲ್ಲದೇ ಕಂಗಾಲಾಗಿದ್ದ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.
Laxmi News 24×7