Breaking News

ಪಾದರಾಯನಪುರದ ಪುಂಡರು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಶಿಫ್ಟ್

Spread the love

ರಾಮನಗರ: ಪಾದರಾಯನಪುರ ಗಲಾಟೆ ಪ್ರಕರಣ ಸಂಬಂಧ ಬಂಧಿಸಲಾಗಿದ್ದ 54 ಆರೋಪಿಗಳನ್ನು ರಾಮನಗರ ಜಿಲ್ಲಾ ಕಾರಾಗೃಹಕ್ಕೆ ರವಾನೆ ಮಾಡಲು ಆದೇಶಿಸಲಾಗಿದೆ.

ರಾಮನಗರ ಜಿಲ್ಲಾ ಕಾರಾಗೃಹಕ್ಕೆ ಆರೋಪಿಗಳನ್ನು ಪರಪ್ಪನ ಅಗ್ರಹಾರದಿಂದ ಶಿಫ್ಟ್ ಮಾಡಲು ಕಾರಾಗೃಹ ಡಿಜಿಪಿ ಅಲೋಕ್ ಮೋಹನ್ ಆದೇಶಿಸಿದ್ದಾರೆ. ಹಾಗೆಯೇ ರಾಮನಗರ ಜೈಲಿನಲ್ಲಿರುವ 177 ಮಂದಿ ಖೈದಿಗಳು, ಆರೋಪಿಗಳನ್ನು ಬೆಂಗಳೂರಿನ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡುವಂತೆ ಕೂಡಾ ಆದೇಶದಲ್ಲಿ ತಿಳಿಸಲಾಗಿದೆ.

ಕೊರೊನಾ ಗ್ರೀನ್ ಜೋನ್‍ನಲ್ಲಿರುವ ರಾಮನಗರ ಜಿಲ್ಲೆಯಲ್ಲಿ ಇಲ್ಲಿಯ ತನಕ ಯಾವುದೇ ಪಾಸಿಟಿವ್ ಕೇಸ್ ಕಾಣಿಸಿಕೊಂಡಿಲ್ಲ. ರಾಮನಗರ ಜೈಲಿನಲ್ಲಿನ ಖೈದಿಗಳು, ಆರೋಪಿಗಳು ಸಹ ಪರಪ್ಪನ ಅಗ್ರಹಾರಕ್ಕೆ ಹೋಗಲು ಹಿಂದೇಟು ಹಾಕುತ್ತಿದ್ದು, ತಮ್ಮನ್ನು ಶಿಫ್ಟ್ ಮಾಡುತ್ತಿರುವುದಕ್ಕೆ ವಿರೋಧಿಸುತ್ತಿದ್ದಾರೆ ಎಂದು ಜೈಲಿನ ಮೂಲಗಳಿಂದ ತಿಳಿದುಬಂದಿದೆ.


Spread the love

About Laxminews 24x7

Check Also

ಕರ್ನಾಟಕದ ಶಾಲೆಗಳಲ್ಲಿ U ಶೇಪ್​ನಲ್ಲಿ ಕುಳಿತುಕೊಳ್ಳುವ ವ್ಯವಸ್ಥೆಗೆ ಒತ್ತಾಯ: ಸಚಿವ ಮಧು ಬಂಗಾರಪ್ಪಗೆ ಪತ್ರ

Spread the loveಬೆಂಗಳೂರು, ಜುಲೈ 16: ಇನ್ಮುಂದೆ ಶಾಲೆಗಳಲ್ಲಿ ಲಾಸ್ಟ್ ಬೆಂಚ್, ಫಸ್ಟ್ ಬೆಂಚ್​ ವಿದ್ಯಾರ್ಥಿಗಳು ಎಂಬ ವಿಧಾನಕ್ಕೆ ಬ್ರೇಕ್ ಬೀಳುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ