Breaking News

ಬೆಳಗಾವಿ: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ನೇಕಾರನ ಕುಟುಂಬಕ್ಕೆ ಸಚಿವರ ಸಾಂತ್ವನ

Spread the love

ಬೆಳಗಾವಿ: ನಗರದ ವಡಗಾವಿಯಲ್ಲಿ ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದ ನೇಕಾರ ಸಿದ್ದಲಿಂಗೇಶ್ವರ ಗಂಗಪ್ಪ ಹೊರಕೇರಿ ಅವರ ಮನೆಗೆ ಕೈಮಗ್ಗ, ಜವಳಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಪಾಟೀಲ ಶನಿವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಕುಟುಂಬದವರಿಗೆ ತಮ್ಮ ‘ಶ್ರೀಮಂತ ಪಾಟೀಲ ಪ್ರತಿಷ್ಠಾನ’ದಿಂದ ಆರ್ಥಿಕ ನೆರವು ನೀಡಿದರು. ಆದಷ್ಟು ಬೇಗ ಇಲಾಖೆಯಿಂದಲೂ ನೆರವು ಕೊಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಇಲಾಖೆಯ ಅಧಿಕಾರಿಗಳು, ಮುಖಂಡರು ಹಾಗೂ ಸ್ಥಳೀಯರು ಇದ್ದರು.


Spread the love

About Laxminews 24x7

Check Also

ದಂಡುಮಂಡಳಿ ಸಭೆ ಅರ್ಧಕ್ಕೆ ಬಿಟ್ಟು ಹೊರ ನಡೆದ ಸಂಸದ ಜಗದೀಶ್ ಶೆಟ್ಟರ್

Spread the loveಬೆಳಗಾವಿ: ಬೆಳಗಾವಿ ದಂಡುಮಂಡಳಿ ಇಂದು ನಡೆಸಿದ ಸಾಮಾನ್ಯ ಸಭೆಯಲ್ಲಿ ಬೆಳಗಾವಿ ಲೋಕಸಭಾ ಸದಸ್ಯ ಜಗದೀಶ ಶೆಟ್ಟರ್ ಇವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ