ಕಂಬಳ ಹೆಸರಿನಲ್ಲಿ ಟೈಟಲ್ ರಿಜಿಸ್ಟರ್
ಮಂಗಳೂರು: ಕಂಬಳ ವೀರ ಶ್ರೀನಿವಾಸ್ ಗೌಡ ಅವರು ವಿಶ್ವದಾದ್ಯಂತ ಭಾರೀ ಸುದ್ದಿಯಾಗುತ್ತಿದ್ದಂತೆ ಸಿನಿಮಾ ಕ್ಷೇತ್ರ ಕೂಡ ಕಂಬಳ ಕ್ಷೇತ್ರದ ದಾಖಲೆಯನ್ನು ಮೂಲ ವಿಷಯವನ್ನಾಗಿ ಇಟ್ಟುಕೊಂಡು ಕನ್ನಡ ಸಿನಿಮಾ ತಯಾರಿಸಲ ನಿರ್ಮಾಪಕರೊಬ್ಬರು ಮುಂದಾಗಿದೆ.

ಮಂಗಳೂರು ಸಮೀಪ ಐಕಳದಲ್ಲಿ ಫೆಬ್ರವರಿ 2ರಂದು ನಡೆದ ಕಂಬಳದಲ್ಲಿ ಮೂಡಬಿದ್ರೆ ಮಿಜಾರು ಅಶ್ವತ್ಥಪುರದ ಶ್ರೀನಿವಾಸ್ ಗೌಡ ಅವರು ದಾಖಲೆ ಬರೆದು ವಿಶ್ವದ ಗಮನ ಸೆಳೆದಿದ್ದರು. ಈ ಹಿನ್ನೆಲೆಯಾಗಿಸಿ ಕಥೆ ತಯಾರಾಗಲಿದೆ. ಕರಾವಳಿ ಮೂಲದ ಉದ್ಯಮಿ ಲೋಕೇಶ್ ಶೆಟ್ಟಿ ಎಂಬವರು ಈಗಾಗಲೇ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಟೈಟಲ್ ರಿಜಿಸ್ಟರ್ ಮಾಡಿದ್ದು, ನಿಖಿಲ್ ಮಂಜು ಅವರು ನಿರ್ದೇಶನ ಮಾಡಲಿದ್ದಾರೆ. ಇದನ್ನೂ ಓದಿ: ಕಂಬಳ ಹೀರೋಗೆ ಸಖತ್ ಡಿಮ್ಯಾಂಡ್- ಒಲಂಪಿಕ್ಸ್ಗೆ ಇಳಿಯೋ ಮುನ್ನವೇ ಶೂ ಕಂಪನಿಗಳಿಂದ ಕರೆ
Laxmi News 24×7