Breaking News

ಕನ್ನಡ ಧ್ವಜ ಮಳೆ-ಬಿಸಿಲಿನಿಂದ ಬಣ್ಣ ಕಳೆದುಕೊಂಡಿದೆ.

Spread the love

ಬೆಳಗಾವಿ: ಮಹಾನಗರ ಪಾಲಿಕೆ ಎದುರು ಅಳವಡಿಸಿರುವ ಕನ್ನಡ ಬಾವುಟ ಮಳೆ-ಬಿಸಿಲಿಗೆ ಮಾಸಿದ್ದರಿಂದ ಅದನ್ನು ಬದಲಾಯಿಸಿ ಹೊಸ ಬಾವುಟ ಅಳವಡಿಸಲು ಸೋಮವಾರ ಬಂದಿದ್ದ ಕನ್ನಡ ಸಂಘಟನೆ ಕಾರ್ಯಕರ್ತರನ್ನು ತಡೆದ ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡರು.

 

ಕನ್ನಡ ಹೋರಾಟಗಾರರಾದ ಶ್ರೀನಿವಾಸ ತಾಳೂಕರ ಹಾಗೂ ವಾಜೀದ್ ಹಿರೇಕೋಡಿ ನೇತೃತ್ವದಲ್ಲಿ ಕನ್ನಡ ಸಂಘಟನೆಗಳ ಮುಖಂಡರು, ಕಾರ್ಯಕರ್ತರು ಪಾಲಿಕೆ ಎದುರು ಪ್ರತಿಭಟನೆ ನಡೆಸಿದರು. ಈ ವೇಳೆ ಸ್ಥಳಕ್ಕೆ ಬಂದ ಪೊಲೀಸರು ದ್ವಜ ಸ್ತಂಬದ ಕಡೆಗೆ ಹೋಗುವುದನ್ನು ತಡೆದರು. ಆಗ ಪೊಲೀಸರೊಂದಿಗೆ ವಾಗ್ವಾದ ನಡೆಸಿದರು.

 

ಹೆಣ್ಣಿನ ಬಗ್ಗೆ ಹೇಗೆ ಮಾತಾಡಬೇಕು ಅಂತ ಕುಮಾರಸ್ವಾಮಿ ಅರ್ಥಮಾಡಿಕೊಳ್ಳಬೇಕು : ಸುಮಲತಾ

 

ಕನ್ನಡ ಧ್ವಜ ಮಳೆ-ಬಿಸಿಲಿನಿಂದ ಬಣ್ಣ ಕಳೆದುಕೊಂಡಿದೆ.

ತುದಿಯಲ್ಲಿ ಸಣ್ಣ ಪ್ರಮಾಣದಲ್ಲಿ ಹರಿದಿದೆ. ಆದರೂ ಪಾಲಿಕೆಯವರು ಧ್ವಜ ಬದಲಾಯಿಸಲು ಮುಂದಾಗುತ್ತಿಲ್ಲ. ರಾಜಕೀಯ ಒತ್ತಡದಿಂದ ಧ್ವಜ ತೆರವುಗೊಳಿಸಲು ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಆರೋಪಿಸಿದರು


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ