Breaking News

ಹಗರಣದ ಹಣದಲ್ಲಿ 5 ಕೋಟಿ ಮೌಲ್ಯದ ಕೃಷಿ ಭೂಮಿ ಖರೀದಿಸಿದ್ದ ಕನ್ನಾಳೆ

Spread the love

ಬೀದರ್:‌ ಕೆಪಿಎಸ್‌ಸಿ ಪಶುವೈದ್ಯಕೀಯ ನೇಮಕಾತಿ ಹಗರಣ ಕೇಸಲ್ಲಿ ಕಿಂಗ್‌ಪಿನ್‌ ಬಸವರಾಜ್‌ ಕನ್ನಾಳೆ ಕರ್ಮಕಾಂಡ ಬಗೆದಷ್ಟೂ ಬಯಲಾಗುತ್ತಿದೆ. ಕೆಪಿಎಸ್‌ಸಿ ಹಗರಣದಲ್ಲಿ ಬಂದ ಕೋಟಿ ಕೋಟಿ ಹಣದಿಂದಲೇ ಕನ್ನಾಳೆ ಕೃಷಿ ಭೂಮಿ ಖರೀದಿ ಮಾಡಿದ್ದ ಅನ್ನೋ ಮಾಹಿತಿ ʻಪಬ್ಲಿಕ್‌ ಟಿವಿʼಗೆ ಲಭ್ಯವಾಗಿದೆ.

ಹೌದು. ಕನ್ನಾಳೆ ಒಂದು ವರ್ಷದ ಹಿಂದೆಯೇ ಸುಮಾರು 5 ಕೋಟಿ ಮೌಲ್ಯದ 20 ಕೃಷಿ ಭೂಮಿ ಖರೀದಿ ಮಾಡಿದ್ದ ಎಂದು ತನಿಖಾ ಮೂಲಗಳು ಬಹಿರಂಗಪಡಿಸಿವೆ.

ಪ್ರತಿ ಎಕರೆಗೆ ಸುಮಾರು 25 ಲಕ್ಷ ರೂಪಾಯಿ ದರದಲ್ಲಿ ಜಮೀನು ಖರೀದಿ ಮಾಡಲಾಗಿದೆ. ಬೀದರ್ ತಾಲೂಕಿನ ಯರನಹಳ್ಳಿ ಗ್ರಾಮದ ಜನವಾಡ ರಸ್ತೆಯಲ್ಲಿರುವ ಸರ್ವೆ ನಂಬರ್ 53, ಹಿಸ್ಸಾ ನಂಬರ್ 1ರ ಜಮೀನು ಖರೀದಿಗೆ ಸಂಬಂಧಿಸಿದ ದಾಖಲೆಗಳು ಇದೀಗ ಗಮನ ಸೆಳೆಯುತ್ತಿವೆ. ಈ ಜಮೀನನ್ನು ಶೋಭಾ ಎಂಬುವವರಿಂದ ಬಸವರಾಜ್ ಕನ್ನಾಳೆ ಖರೀದಿಸಿದ್ದ ಅನ್ನೋದು ಗೊತ್ತಾಗಿದೆ. ಈ ಬಗ್ಗೆಯೂ ಸಿಐಡಿ ತಂಡಗಳು ತನಿಖೆ ನಡೆಸುತ್ತಿವೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಕೇಸ್‌ – ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿಗೆ ಜಾಮೀನು

Spread the loveಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ ಉಡುಪಿ ಮೂಲದ ಗೌರವ್ ಶೆಟ್ಟಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ